ರಾಜ್ಯ

ಕುಡಿಯುವ ನೀರಿನ ಕೊರತೆ ; ʼವರ್ಕ್‌ ಫ್ರಂ ಹೋಮ್‌ʼಗೆ ಐಟಿ ಉದ್ಯೋಗಿಗಳ ಬೇಡಿಕೆ !

ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ ಕೆಲಸ ಮಾಡುತ್ತಿರುವ ಐಟಿ ಕಂಪನಿಯ ಉದ್ಯೋಗಿಗಳು ತಮಗೆ ವರ್ಕ್‌ ಫ್ರಂ ಹೋಮ್‌ ನೀಡಿ ಎಂದು ಕಂಪನಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ನಗರದಲ್ಲಿ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ 15 ಲಕ್ಷಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಒತ್ತಾಯಿಸಿರುವುದಾಗಿ ವರದಿಯಾಗಿದೆ.

ಅಂಕಿ ಅಂಶಗಳ ಪ್ರಕಾರ, ನಗರಕ್ಕೆ ಪ್ರತಿ ದಿನ 2,600 ಎಂಎಲ್​ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಬೆಂಗಳೂರು ನಗರವು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.

ನೀರಿನ ಬಿಕ್ಕಟ್ಟು ಹಲವಾರು ವಾರಗಳಿಂದ ಮುಂದುವರಿದಿರುವುದರಿಂದ ಕರ್ನಾಟಕ ಸರ್ಕಾರವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸುಮಾರು 15 ಲಕ್ಷ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸುವುದರಿಂದ ಅಲ್ಪಾವಧಿಯ ಪರಿಹಾರ ದೊರೆಯಲಿದೆ ಎಂದು ಕರ್ನಾಟಕ ಮತ್ತು ಅಸ್ಸಾಂನ ಹೈಕೋರ್ಟ್‌ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ ಶ್ರೀಧರ್ ರಾವ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ಮರಳಬಹುದು. ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

3 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

3 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

4 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

5 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

5 hours ago