ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.
ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ ಕೆಲಸ ಮಾಡುತ್ತಿರುವ ಐಟಿ ಕಂಪನಿಯ ಉದ್ಯೋಗಿಗಳು ತಮಗೆ ವರ್ಕ್ ಫ್ರಂ ಹೋಮ್ ನೀಡಿ ಎಂದು ಕಂಪನಿಗಳಿಗೆ ಬೇಡಿಕೆ ಇಟ್ಟಿದ್ದಾರೆ.
ನಗರದಲ್ಲಿ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ 15 ಲಕ್ಷಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಒತ್ತಾಯಿಸಿರುವುದಾಗಿ ವರದಿಯಾಗಿದೆ.
ಅಂಕಿ ಅಂಶಗಳ ಪ್ರಕಾರ, ನಗರಕ್ಕೆ ಪ್ರತಿ ದಿನ 2,600 ಎಂಎಲ್ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಬೆಂಗಳೂರು ನಗರವು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.
ನೀರಿನ ಬಿಕ್ಕಟ್ಟು ಹಲವಾರು ವಾರಗಳಿಂದ ಮುಂದುವರಿದಿರುವುದರಿಂದ ಕರ್ನಾಟಕ ಸರ್ಕಾರವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿರುವ ಸುಮಾರು 15 ಲಕ್ಷ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸುವುದರಿಂದ ಅಲ್ಪಾವಧಿಯ ಪರಿಹಾರ ದೊರೆಯಲಿದೆ ಎಂದು ಕರ್ನಾಟಕ ಮತ್ತು ಅಸ್ಸಾಂನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ ಶ್ರೀಧರ್ ರಾವ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ಮರಳಬಹುದು. ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…