ರಾಜ್ಯ

ಕುಡಿಯುವ ನೀರಿನ ಕೊರತೆ ; ʼವರ್ಕ್‌ ಫ್ರಂ ಹೋಮ್‌ʼಗೆ ಐಟಿ ಉದ್ಯೋಗಿಗಳ ಬೇಡಿಕೆ !

ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ ಕೆಲಸ ಮಾಡುತ್ತಿರುವ ಐಟಿ ಕಂಪನಿಯ ಉದ್ಯೋಗಿಗಳು ತಮಗೆ ವರ್ಕ್‌ ಫ್ರಂ ಹೋಮ್‌ ನೀಡಿ ಎಂದು ಕಂಪನಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ನಗರದಲ್ಲಿ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ 15 ಲಕ್ಷಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಒತ್ತಾಯಿಸಿರುವುದಾಗಿ ವರದಿಯಾಗಿದೆ.

ಅಂಕಿ ಅಂಶಗಳ ಪ್ರಕಾರ, ನಗರಕ್ಕೆ ಪ್ರತಿ ದಿನ 2,600 ಎಂಎಲ್​ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಬೆಂಗಳೂರು ನಗರವು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.

ನೀರಿನ ಬಿಕ್ಕಟ್ಟು ಹಲವಾರು ವಾರಗಳಿಂದ ಮುಂದುವರಿದಿರುವುದರಿಂದ ಕರ್ನಾಟಕ ಸರ್ಕಾರವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸುಮಾರು 15 ಲಕ್ಷ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸುವುದರಿಂದ ಅಲ್ಪಾವಧಿಯ ಪರಿಹಾರ ದೊರೆಯಲಿದೆ ಎಂದು ಕರ್ನಾಟಕ ಮತ್ತು ಅಸ್ಸಾಂನ ಹೈಕೋರ್ಟ್‌ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ ಶ್ರೀಧರ್ ರಾವ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ಮರಳಬಹುದು. ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

2 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

2 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

2 hours ago