ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.
ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ ಕೆಲಸ ಮಾಡುತ್ತಿರುವ ಐಟಿ ಕಂಪನಿಯ ಉದ್ಯೋಗಿಗಳು ತಮಗೆ ವರ್ಕ್ ಫ್ರಂ ಹೋಮ್ ನೀಡಿ ಎಂದು ಕಂಪನಿಗಳಿಗೆ ಬೇಡಿಕೆ ಇಟ್ಟಿದ್ದಾರೆ.
ನಗರದಲ್ಲಿ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ 15 ಲಕ್ಷಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಒತ್ತಾಯಿಸಿರುವುದಾಗಿ ವರದಿಯಾಗಿದೆ.
ಅಂಕಿ ಅಂಶಗಳ ಪ್ರಕಾರ, ನಗರಕ್ಕೆ ಪ್ರತಿ ದಿನ 2,600 ಎಂಎಲ್ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಬೆಂಗಳೂರು ನಗರವು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.
ನೀರಿನ ಬಿಕ್ಕಟ್ಟು ಹಲವಾರು ವಾರಗಳಿಂದ ಮುಂದುವರಿದಿರುವುದರಿಂದ ಕರ್ನಾಟಕ ಸರ್ಕಾರವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿರುವ ಸುಮಾರು 15 ಲಕ್ಷ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸುವುದರಿಂದ ಅಲ್ಪಾವಧಿಯ ಪರಿಹಾರ ದೊರೆಯಲಿದೆ ಎಂದು ಕರ್ನಾಟಕ ಮತ್ತು ಅಸ್ಸಾಂನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ ಶ್ರೀಧರ್ ರಾವ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ಮರಳಬಹುದು. ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…