ರಾಜ್ಯ

ಕುಡಿಯುವ ನೀರಿನ ಕೊರತೆ ; ʼವರ್ಕ್‌ ಫ್ರಂ ಹೋಮ್‌ʼಗೆ ಐಟಿ ಉದ್ಯೋಗಿಗಳ ಬೇಡಿಕೆ !

ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಹೀಗಿರುವಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಈ ಮಧ್ಯೆ ಆಜಧಾನಿಯಲ್ಲಿ ಕೆಲಸ ಮಾಡುತ್ತಿರುವ ಐಟಿ ಕಂಪನಿಯ ಉದ್ಯೋಗಿಗಳು ತಮಗೆ ವರ್ಕ್‌ ಫ್ರಂ ಹೋಮ್‌ ನೀಡಿ ಎಂದು ಕಂಪನಿಗಳಿಗೆ ಬೇಡಿಕೆ ಇಟ್ಟಿದ್ದಾರೆ.

ನಗರದಲ್ಲಿ ತೀವ್ರ ನೀರಿನ ಸಮಸ್ಯೆಯಿಂದ ಬೆಂಗಳೂರಿನ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ಈ ನಡುವೆ 15 ಲಕ್ಷಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕಂಪನಿಗಳನ್ನು ಒತ್ತಾಯಿಸಿರುವುದಾಗಿ ವರದಿಯಾಗಿದೆ.

ಅಂಕಿ ಅಂಶಗಳ ಪ್ರಕಾರ, ನಗರಕ್ಕೆ ಪ್ರತಿ ದಿನ 2,600 ಎಂಎಲ್​ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಬೆಂಗಳೂರು ನಗರವು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ ಕೊರತೆಯನ್ನು ಎದುರಿಸುತ್ತಿದೆ.

ನೀರಿನ ಬಿಕ್ಕಟ್ಟು ಹಲವಾರು ವಾರಗಳಿಂದ ಮುಂದುವರಿದಿರುವುದರಿಂದ ಕರ್ನಾಟಕ ಸರ್ಕಾರವು ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು ಎಂದು ತಜ್ಞರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸುಮಾರು 15 ಲಕ್ಷ ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಒದಗಿಸುವುದರಿಂದ ಅಲ್ಪಾವಧಿಯ ಪರಿಹಾರ ದೊರೆಯಲಿದೆ ಎಂದು ಕರ್ನಾಟಕ ಮತ್ತು ಅಸ್ಸಾಂನ ಹೈಕೋರ್ಟ್‌ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ ಶ್ರೀಧರ್ ರಾವ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನ ಅವರ ಊರುಗಳಿಗೆ ಮರಳಬಹುದು. ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

4 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

4 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

5 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

5 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

10 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

10 hours ago