ರಾಜ್ಯ

ಕೆರೆ ಒತ್ತುವರಿ ; ಗರಂ ಆದ ಸಿಎಂ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು : ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆಯನ್ನು ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ ಸಭೆ ನಡೆಸಿ ಅವರು ಮಾತನಾಡಿದರು. ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6,065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇತರ ಪ್ರಮುಖ ಅಂಶಗಳು ಹೀಗಿವೆ…

•ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ.

•ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು.

* ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.

•ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು. 1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ.

•ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು.

•ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

1 hour ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

2 hours ago