ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ.
ನವೆಂಬರ್.15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನು ಓದಿ: ರಾಮನಗರಿ ಅಯೋಧ್ಯೆಯಲ್ಲಿ ಅದ್ಭುತ ದೀಪೋತ್ಸವ
ನವೆಂಬರ್.15ರಂದು ಬೆಳಿಗ್ಗೆ ಧರ್ಮಸ್ಥಳ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗಲಿದೆ. ಸಂಜೆ ಭಕ್ತರಿಂದ ಉಜಿರೆ ಜನಾರ್ಧನ ಸ್ವಾಮಿ ಸನ್ನಿಧಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆ ಪಾದಯಾತ್ರೆ ನಡೆಯಲಿದೆ. ಅಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸ ಕಟ್ಟೆ ಉತ್ಸವ, ನವೆಂಬರ್.16ರಂದು ಕರೆಕಟ್ಟೆ ಉತ್ಸವ ನಡೆಯಲಿದೆ.
ನವೆಂಬರ್.17ರಂದು ಲಲಿತೋದ್ಯಾನ ಉತ್ಸವ, ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಾ ಕಲಾಗೋಷ್ಠಿ ನಡೆಯಲಿದೆ. ನವೆಂಬರ್.18ರಂದು ಕಂಚಿ ಮಾರುಕಟ್ಟೆ ಉತ್ಸವ, ಸರ್ವಧರ್ಮ ಸಮ್ಮೇಳನ, ನವೆಂಬರ್.19ರಂದು ಗೌರಿ ಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ, ನವೆಂಬರ್.20ರಂದು ಶ್ರೀ ಚಂದ್ರನಾಥ ಸ್ವಾಮಿ ಸಮ ವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವಕ್ಕೆ ತೆರೆ ಬೀಳಲಿದೆ. ಲಕ್ಷ ದೀಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಯ ಆಗಮಿಸಲಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…