ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ.
ನವೆಂಬರ್.15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನು ಓದಿ: ರಾಮನಗರಿ ಅಯೋಧ್ಯೆಯಲ್ಲಿ ಅದ್ಭುತ ದೀಪೋತ್ಸವ
ನವೆಂಬರ್.15ರಂದು ಬೆಳಿಗ್ಗೆ ಧರ್ಮಸ್ಥಳ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗಲಿದೆ. ಸಂಜೆ ಭಕ್ತರಿಂದ ಉಜಿರೆ ಜನಾರ್ಧನ ಸ್ವಾಮಿ ಸನ್ನಿಧಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆ ಪಾದಯಾತ್ರೆ ನಡೆಯಲಿದೆ. ಅಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸ ಕಟ್ಟೆ ಉತ್ಸವ, ನವೆಂಬರ್.16ರಂದು ಕರೆಕಟ್ಟೆ ಉತ್ಸವ ನಡೆಯಲಿದೆ.
ನವೆಂಬರ್.17ರಂದು ಲಲಿತೋದ್ಯಾನ ಉತ್ಸವ, ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಾ ಕಲಾಗೋಷ್ಠಿ ನಡೆಯಲಿದೆ. ನವೆಂಬರ್.18ರಂದು ಕಂಚಿ ಮಾರುಕಟ್ಟೆ ಉತ್ಸವ, ಸರ್ವಧರ್ಮ ಸಮ್ಮೇಳನ, ನವೆಂಬರ್.19ರಂದು ಗೌರಿ ಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ, ನವೆಂಬರ್.20ರಂದು ಶ್ರೀ ಚಂದ್ರನಾಥ ಸ್ವಾಮಿ ಸಮ ವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವಕ್ಕೆ ತೆರೆ ಬೀಳಲಿದೆ. ಲಕ್ಷ ದೀಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಯ ಆಗಮಿಸಲಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…