ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ನಡೆಸಿದ್ದು,ಮೃಣಾಲ್ನನ್ನು ವಿಚಾರಣೆ ನಡೆಸಿದ್ದಾರೆ.
ಇದೀಗ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…