ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ನಡೆಸಿದ್ದು,ಮೃಣಾಲ್ನನ್ನು ವಿಚಾರಣೆ ನಡೆಸಿದ್ದಾರೆ.
ಇದೀಗ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…