ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ನಡೆಸಿದ್ದು,ಮೃಣಾಲ್ನನ್ನು ವಿಚಾರಣೆ ನಡೆಸಿದ್ದಾರೆ.
ಇದೀಗ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…