ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ ನಡೆಸಿದ್ದು,ಮೃಣಾಲ್ನನ್ನು ವಿಚಾರಣೆ ನಡೆಸಿದ್ದಾರೆ.
ಇದೀಗ ಶಾಸಕ ಲಕ್ಷ್ಮಣ ಸವದಿ ಕುಟುಂಬಕ್ಕೂ ಹುಲಿ ಉಗುರು ಸಂಕಷ್ಟ ತಂದಿದೆ. ಸವದಿ ಪುತ್ರ ಸುಮಿತ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಫೋಟೋ ವೈರಲ್ ಆಗಿದೆ.
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ದ್ವಿತೀಯ ಪುತ್ರ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿರುವ ಫೋಟೋಸ್ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಬಳಿಕ ಈಗ ಲಕ್ಷಣ್ ಸವದಿ ಕುಟುಂಬಕ್ಕೆ ಹುಲಿ ಉಗುರು ಕಂಟಕವಾಗಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ದ್ವಿತೀಯ ಪುತ್ರ ಸುಮಿತ್ ಕೊರಳಲ್ಲೂ ಹುಲಿ ಉಗುರು ಮಾದರಿಯ ಪೆಂಡೆಂಟ್ ಕಂಡು ಬಂದಿದೆ. ಕಳೆದ ವರ್ಷ ಸುಮಿತ್ ಸವದಿ ಮದುವೆ ಸಮಾರಂಭದ ವೇಳೆ ಸುಮಿತ್ ಅವರು ಎರಡು ಹುಲಿ ಉಗುರುಗಳಿರುವ ಪೆಂಡೆಂಟ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…