ರಾಜ್ಯ

ನನ್ನ ಮೌನವೂ ವೀಕ್ನೆಸ್ ಅಲ್ಲಾ : ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಖಡಕ್ ಸಂದೇಶ

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ನನ್ನ ಮೌನವೂ ವೀಕ್ನೆಸ್ ಅಲ್ಲಾ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್​ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಎಂದು ತಮ್ಮ ಮತ್ತು ಸತೀಶ್​ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.

ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್​ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಹೇಳಿದರು.

 

lokesh

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

8 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago