ರಾಜ್ಯ

ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಕಿಡಿ

ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಪೂರ್ಣ ಚರ್ಚೆಯ ಬಳಿಕವಷ್ಟೇ ಪ್ರತಿಕ್ರಿಯಿಸುವೆ

ಜಾತಿ ಗಣತಿ ವರದಿ ಇನ್ನೂ ಚರ್ಚೆಯ ಹಂತದಲ್ಲಿದೆ. ಮೊನ್ನೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆಯಷ್ಟೇ ಆಗಿದೆ. ಇದರ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದೆ. ಸಂಪೂರ್ಣವಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಆದ ಬಳಿಕವಷ್ಟೇ ಪ್ರತಿಕ್ರಿಯಿಸುವುದಾಗಿ ಹೇಳಿದರು.

ಇದನ್ನೂ ಓದಿ:- ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವೈಜ್ಞಾನಿಕವಾಗಿದೆ: ಸಚಿವ ಎಚ್‌.ಸಿ.ಮಹದೇವಪ್ಪ

ಜಾತಿಗಣತಿ ವರದಿ ಬಗ್ಗೆ ಇರುವ ಉಹಾಪೋಹಗಳಿಗೆ ಎಡೆಮಾಡಿಕೊಡುವುದು ಬೇಡ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ. ಜಾತಿಗಣತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯ ವೇಳೆ ಸಚಿವರ ನಡುವೆ ಗಲಾಟೆ, ವಾಗ್ವಾದ ನಡೆದಿಲ್ಲ ಸಚಿವರು ಸ್ಪಷ್ಟಪಡಿಸಿದರು.

ತನಿಖೆ ಬಳಿಕ ಸತ್ಯಾಂಶ ಬಯಲು

ಕಳೆದ ಜನವರಿ 14 ರಂದು ಕಾರು ಅಪಘಾತಕ್ಕೆ ಕಾರಣವಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ನಾನು ಕೂಡ ನಿದ್ದೆಗಣ್ಣಿನಲ್ಲಿದ್ದೆ, ನನಗೆ ಯಾವ ರೀತಿಯ ಅನುಮಾನವಿಲ್ಲ. ಚಾಲಕನನ್ನು ಹಿಡಿಯಲು ಪೊಲೀಸರು ಸಾಕಷ್ಟು ಶ್ರಮ ಹಾಕಿದ್ದಾರೆ. ಚಾಲಕ ಮಹಾರಾಷ್ಟ್ರದ ಪುಣೆ ಮೂಲದವರು ಎಂದು ತಿಳಿದು ಬಂದಿದೆ. ಬೆಳಗಾವಿ ಪೊಲೀಸರು ಬಹಳ ಚುರುಕಾಗಿ ತನಿಖೆ ನಡೆಸಿ ಚಾಲಕನನ್ನು ಹಿಡಿದಿದ್ದಾರೆ. ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

11 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

12 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

13 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

13 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

14 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

15 hours ago