ರಾಜ್ಯ

ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಅನೇಕ ಕಾರ್ಯಕ್ರಮ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.13) ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಹೇಮಲತಾ ನಾಯಕ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ಅವರಿಗೂ ಸಿಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಪ್ರಸ್ತುತ 2,653 ದೇವದಾಸಿಯರಲ್ಲಿ 2550 ಮಹಿಳೆಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಅಲ್ಲದೇ 45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ತಲಾ 30 ಸಾವಿರದಂತೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದಿದ್ದಾರೆ.

ಸಾಮಾನ್ಯ ಮಹಿಳೆಯರಂತೆಯೇ ಮಾಜಿ ದೇವದಾಸಿ ಮಹಿಳೆಯರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದ್ದು, ಮಾಜಿ ದೇವದಾಸಿ ವಸತಿ ಯೋಜನೆಯಡಿ ಕೊಪ್ಪಳ‌ ಜಿಲ್ಲೆಗೆ ಕಳೆದ 10 ವರ್ಷಗಳಲ್ಲಿ 823 ಮನೆಗಳು ಮಂಜೂರಾಗಿವೆ. ಅಲ್ಲದೇ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ, ಈ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂಪಾಯಿ ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

3 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

4 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

4 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

4 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

5 hours ago