ರಾಜ್ಯ

ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಅನೇಕ ಕಾರ್ಯಕ್ರಮ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.13) ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಹೇಮಲತಾ ನಾಯಕ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ಅವರಿಗೂ ಸಿಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಪ್ರಸ್ತುತ 2,653 ದೇವದಾಸಿಯರಲ್ಲಿ 2550 ಮಹಿಳೆಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಅಲ್ಲದೇ 45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ತಲಾ 30 ಸಾವಿರದಂತೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದಿದ್ದಾರೆ.

ಸಾಮಾನ್ಯ ಮಹಿಳೆಯರಂತೆಯೇ ಮಾಜಿ ದೇವದಾಸಿ ಮಹಿಳೆಯರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದ್ದು, ಮಾಜಿ ದೇವದಾಸಿ ವಸತಿ ಯೋಜನೆಯಡಿ ಕೊಪ್ಪಳ‌ ಜಿಲ್ಲೆಗೆ ಕಳೆದ 10 ವರ್ಷಗಳಲ್ಲಿ 823 ಮನೆಗಳು ಮಂಜೂರಾಗಿವೆ. ಅಲ್ಲದೇ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ, ಈ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂಪಾಯಿ ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

11 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

15 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

16 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

16 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

16 hours ago