ರಾಜ್ಯ

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌14) ವಿಧಾನಪರಿಷತ್‌ ಕಲಾಪದಲ್ಲಿ ಈ ಕುರಿತು ವಿಧಾನ ಪರಿಷತ್‌ ಸದಸ್ಯ ವೈ.ಎಂ.ಸತೀಶ್‌ ಅವರು, ಎಲ್ಲಾ ರೀತಿಯ ಅಂಗ ವೈಫಲ್ಯ ಒಳಗೊಂಡ ವಿಮೆ ಯೋಜನೆಗಳಿಯೇ? ವಿಶೇಷ ಚೇತನರಿಗೆ ಯಾವ ಬಗೆಯ ಸೌಲಭ್ಯಗಳಿವೆ ಎಂದು ಪ್ರಶ್ನಿಸಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಅಂಗವೀಕಲತೆ ನಿವಾರಣೆಗಾಗಿ ವೈದ್ಯಕೀಯ ಪರಿಹಾರ ನಿಧಿ ಹಾಗೂ ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದರು.

ಇನ್ನು ವಿಕಲಚೇತನರಿಗೆ ಒಂದು ಲಕ್ಷದವರೆಗೆ ವಿಮೆ ಸೌಲಭ್ಯವಿದ್ದು, ಒಂದು ವರ್ಷಕ್ಕೆ ಒಂದು ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ ಅದನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

17 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

17 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

17 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

17 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

18 hours ago