ರಾಜ್ಯ

ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬೆಳಗಾವಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಬಗ್ಗೆ ಕಿಡಿ ಕಾರಿದ ಸಚಿವರು, ನಾಡಿನ ಮುಖ್ಯಮಂತ್ರಿಗಳಿಗೆ ಬಿಜೆಪಿಗರು ಅಗೌರವ ತೋರಿದ್ದಾರೆ. ಇದು ಬಿಜೆಪಿಯವರ ಹತಾಶ ಮನೋಭಾವವನ್ನು ತೋರುತ್ತದೆ ಎಂದರು.

ಬಿಜೆಪಿಯವರಿಗೆ ಧೈರ್ಯವಿದ್ದರೆ ಎದುರಿಗೆ ಬಂದು ಪ್ರತಿಭಟಿಸಬಹುದಿತ್ತು. ಆ ಧೈರ್ಯ ಅವರಿಗಿಲ್ಲ. ಬೆಲೆ ಏರಿಕೆ ಯಾರಿಂದ ಆಗಿದೆ ಅನ್ನೋದು ಜನರಿಗೂ ಗೊತ್ತು. ಇಂಥ ಸಮಾರಂಭದಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.‌

ನಮಗೂ ಪ್ರತಿಭಟಿಸಲು ಬರುತ್ತದೆ. ಬಿಜೆಪಿಯವರು‌ ಆಯೋಜಿಸುವ ಸಮಾರಂಭಗಳಲ್ಲಿ ಪ್ರತಿಭಟನೆ, ಗಲಾಟೆ ಮಾಡಬಹುದು. ಬೀದಿ ಬೀದಿಗಳಲ್ಲಿ ಪ್ರತಿಭಟಿಸಬಹುದು. ನಮಗೂ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳಿದ್ದಾರೆ ಎಂದು ಹೇಳಿದರು.

ಇದೇ ರೀತಿ ಮುಂದುವರಿಸಿದರೆ, ನಾವು ಏನು ಮಾಡಬೇಕೆಂದು ಯೋಚಿಸಬೇಕಾಗುತ್ತದೆ. ನಮ್ಮ ರಾಜ್ಯಾಧ್ಯಕ್ಷರು ಈಗಾಗಲೇ ಎಚ್ಚರಿಕೆಯ ಜೊತೆಗೆ ಮನವಿಯನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ. ಇಂಥ ಪ್ರತಿಭಟನೆಗಳನ್ನು ಸಿಎಂ, ಡಿಸಿಎಂ, ನಾವುಗಳು ನೋಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

9 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

9 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

11 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

12 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

13 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 hours ago