lakshmi hebbalkar
ಬೆಳಗಾವಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಬಗ್ಗೆ ಕಿಡಿ ಕಾರಿದ ಸಚಿವರು, ನಾಡಿನ ಮುಖ್ಯಮಂತ್ರಿಗಳಿಗೆ ಬಿಜೆಪಿಗರು ಅಗೌರವ ತೋರಿದ್ದಾರೆ. ಇದು ಬಿಜೆಪಿಯವರ ಹತಾಶ ಮನೋಭಾವವನ್ನು ತೋರುತ್ತದೆ ಎಂದರು.
ಬಿಜೆಪಿಯವರಿಗೆ ಧೈರ್ಯವಿದ್ದರೆ ಎದುರಿಗೆ ಬಂದು ಪ್ರತಿಭಟಿಸಬಹುದಿತ್ತು. ಆ ಧೈರ್ಯ ಅವರಿಗಿಲ್ಲ. ಬೆಲೆ ಏರಿಕೆ ಯಾರಿಂದ ಆಗಿದೆ ಅನ್ನೋದು ಜನರಿಗೂ ಗೊತ್ತು. ಇಂಥ ಸಮಾರಂಭದಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.
ನಮಗೂ ಪ್ರತಿಭಟಿಸಲು ಬರುತ್ತದೆ. ಬಿಜೆಪಿಯವರು ಆಯೋಜಿಸುವ ಸಮಾರಂಭಗಳಲ್ಲಿ ಪ್ರತಿಭಟನೆ, ಗಲಾಟೆ ಮಾಡಬಹುದು. ಬೀದಿ ಬೀದಿಗಳಲ್ಲಿ ಪ್ರತಿಭಟಿಸಬಹುದು. ನಮಗೂ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳಿದ್ದಾರೆ ಎಂದು ಹೇಳಿದರು.
ಇದೇ ರೀತಿ ಮುಂದುವರಿಸಿದರೆ, ನಾವು ಏನು ಮಾಡಬೇಕೆಂದು ಯೋಚಿಸಬೇಕಾಗುತ್ತದೆ. ನಮ್ಮ ರಾಜ್ಯಾಧ್ಯಕ್ಷರು ಈಗಾಗಲೇ ಎಚ್ಚರಿಕೆಯ ಜೊತೆಗೆ ಮನವಿಯನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ. ಇಂಥ ಪ್ರತಿಭಟನೆಗಳನ್ನು ಸಿಎಂ, ಡಿಸಿಎಂ, ನಾವುಗಳು ನೋಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…