ರಾಜ್ಯ

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ ಚಾಲಿತ ಭೂ ಪರಿವರ್ತನೆಗಾಗಿ ಅಭಿವೃದ್ಧಿಪಡಿಸಿರುವ ತಂತ್ರಾಂಶಕ್ಕೆ ರಾಜ್ಯ ಸರ್ಕಾರ ಶುಕ್ರವಾರ ಚಾಲನೆ ನೀಡಿದೆ.

ನವೀಕರಿಸಬಹುದಾದ ಇಂಧನ ಯೋಜನೆಯ ಸ್ಥಾಪನೆಗೆ ಭೂಪರಿರ್ವತನೆಯಿಂದ ವಿನಾಯಿತಿ ನೀಡಿ, ಪರಿಭಾವಿತ (ಡೀಮ್ಡ್‌) ಭೂ ಪರಿವರ್ತನೆಗೆ 30 ದಿನಗಳ ಗಡುವಿನ ನಂತರ ಸ್ವಯಂ ಚಾಲಿತ ಭೂ ಪರಿವರ್ತನೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸಸೌಧದಲ್ಲಿ ಶುಕ್ರವಾರ ಚಾಲನೆ ನೀಡಿದರು.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95 ಮತ್ತು ಕರ್ನಾಟಕ ಭೂ ಕಂದಾಯ ನಿಯಮಗಳ 1996ರ ನಿಯಮ 106(ಇ), 106(ಎಫ್‌)ರ ತಿದ್ದುಪಡಿಯಂತೆ ನವೀಕರಿಸಬಹುದಾದ ಇಂಧನಗಳ ಭೂ ಪರಿವರ್ತನೆಗೆ ಸಂಬಂಧಿಸಿದ ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಮಾಡಲು ಕಂದಾಯ ಇಲಾಖೆ ಅಭಿವೃದ್ಧಿ ಪಡಿಸಿದ್ದ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಳವಡಿಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಲಾಗಿದೆ.

ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ” 2030ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೊಂದುವ ದೇಶದ ಗುರಿಗೆ ಪೂರಕವಾಗಿ ಯೋಜನೆಗಳ ಅನಷ್ಠಾನಕ್ಕೆ ಕರ್ನಾಟಕ ಬದ್ಧವಾಗಿದೆ. ಇಂಧನ ಭದ್ರತೆ ಒದಗಿಸುವ ಜವಾಬ್ದಾರಿ ಜತೆಗೆ ಪರಿಸರ ಸಂರಕ್ಷಣೆಯೂ ಅತಿ ಮುಖ್ಯ. ಈ ನಿಟ್ಟಿನಲ್ಲಿ ಪಳಿಯುಳಿಕೆ ಇಂಧನದ ಬಳಕೆ ತಗ್ಗಿಸಿ, ನವೀಕರಿಸಬಹುದಾದ ಇಂಧನದ ಬಳಕೆಗೆ ಒತ್ತು ನೀಡಬೇಕಿದೆ. ಹಾಗಾಗಿ, ನವೀಕರಿಸಬಹುದಾದ ಯೋಜನೆಗಳಿಗೆ ಭೂ ಮಾಲೀಕರಿಂದ ಭೂಮಿ ಪಡೆಯಲು ಅನುಕೂಲವಗುವಂತೆ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ,” ಎಂದರು.

“ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದ್ದು, 2025ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನವೀಕರಿಸಬಹುದಾದ ಇಂಧನ ವಲಯಕ್ಕೆ 4 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಇದು ರಾಜ್ಯವು ಪಡೆದುಕೊಂಡಿರುವ ಒಟ್ಟು ಹೂಡಿಕೆಯ ಸುಮಾರು ಶೇ. 40 ರಷ್ಟು. ಸುಲಲಿತ ವ್ಯವಹಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಭೂ ಪರಿವರ್ತನೆಯ ನಿಯಮಗಳನ್ನು ಸರಳಗೊಳಿಸುವ ಬಗ್ಗೆ ಸಮಾವೇಶದಲ್ಲಿ ನೀಡಿದ್ದ ಭರವಸೆಯನ್ನ ಈ ತಂತ್ರಾಂಶ ಬಿಡುಗಡೆ ಮೂಲಕ ಈಡೇರಿಸಲಾಗಿದೆ. ಭೂ ಪರಿವರ್ತನೆಯ ಕಾನೂನು ಸರಳಗೊಳಿಸುವ ಜತೆಗೆ ಪ್ರಕ್ರಿಯೆಯನ್ನು ಆನ್‌ಲೈನ್‌ ನಲ್ಲಿ ನಡೆಸುವ ಮೂಲಕ ಪಾರದರ್ಶಕತೆಗೆ ಒತ್ತು ನೀಡಲಾಗಿದೆ,” ಎಂದರು.

” ರಾಜಸ್ಥಾನ ಹಾಗೂ ಗುಜರಾತಿನಲ್ಲಿ ಬರಡು ಭೂಮಿ ಹೆಚ್ಚಿದ್ದು, ಅಲ್ಲಿ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಯೆಥೇಚ್ಛವಾಗಿ ಭೂಮಿ ದೊರೆಯುತ್ತದೆ. ಕರ್ನಾಟಕದಲ್ಲಿ ಫಲವತ್ತಾದ ಕೃಷಿ ಭೂಮಿ ಹೆಚ್ಚಿದ್ದು, ಕೃಷಿಯೇತರ ಭೂಮಿ ಲಭ್ಯತೆ ಕಡಮೆ ಇದ್ದರೂ, ನವೀಕರಿಸಬುದಾದ ಯೋಜನೆಗಳ ಅನುಷ್ಠಾನದಲ್ಲಿ ನಾವು ಹಿಂದೆ ಉಳಿದಿಲ್ಲ ಎಂಬದು ಹೆಮ್ಮೆಯ ವಿಷಯ. ಇಂಧನ ಸಚಿವರಾದ ಕೆ.ಜೆ ಜಾರ್ಜ್‌ ಅವರೂ ನವೀಕರಿಸಬಹುದಾದದ ಯೋಜನೆಗಳ ಭೂ ಪರಿವರ್ತನೆಯ ಕಾನೂನು ಸರಳಗೊಳಿಸಲು ಕೋರಿ ಹಲವಾರು ಸಭೆಗಳನ್ನು ನಡೆಸಿದ್ದರು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮೆಗಾ ಇಂಜಿನಿಯರಿಂಗ್ ಅಂಡ್‌ ಇನ್ ಫ್ರಾಸ್ಟ್ರಕ್ಷನ್‌ ಕಂಪನಿಯ ಸಿಇಓಗೆ ಸ್ವಯಂ ಚಾಲಿತ ಭೂ ಪರವರ್ತನೆಯ ದಾಖಲೆಗಳನ್ನು ಕಂದಾಯ ಸಚಿವರು ಹಸ್ತಾಂತರಿಸಿದರು. ತಂತ್ರಾಂಶ ಚಾಲನೆಗೂ ಮೊದಲು ನವೀಕರಿಸಬಹುದಾದ ಇಂಧನ ಸಂಸ್ಥೆಗಳ ಮುಖ್ಯಸ್ಥರು, ನವೀಕರಿಸಬಹುದಾದ ಇಂಧನ ಸಂಸ್ಥೆಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಚಿವರು ಮತ್ತು ಅಧಿಕಾರಿಗಳು ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಕ್ರೆಡಲ್‌ ಅಧ್ಯಕ್ಷ ಟಿ.ಡಿ ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಮೀನಾ ನಾಗರಾಜ್‌, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago