ರಾಜ್ಯ

ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ ಪಾಟೀಲ ಭಾನುವಾರ ಇಲ್ಲಿ ಸ್ಪಷ್ಟಪಡಿಸಿದರು.

ಈ ವಿಷಯದಲ್ಲಿ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ. ಆಗೊಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು ಎಂದು ಸಚಿವ ಪಾಟೀಲ ತಿರುಗೇಟು ನೀಡಿದರು.

ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್ ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ ಎಂದು ಅವರು ವಿವರಿಸಿದರು.

ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ ₹90 ಸಾವಿರ‌ ಕೋಟಿ ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ’ ಎಂದು ಅವರು ಎಚ್ಚರಿಸಿದರು.

ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿ ಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ ಅವರ ಜಾಣಮೌನ ಯಾಕೆ ಎಂದು ಪಾಟೀಲ ಪ್ರಶ್ನಿಸಿದ್ದಾರೆ.

ಜಿಂದಾಲ್ ಸಂಸ್ಥೆ- ಕರ್ನಾಟಕ ಸರ್ಕಾರ ನಡುವಿನ ಪ್ರಕರಣದ ಹೈಕೋರ್ಟ್ ರಿಟ್ ಅರ್ಜಿ ಸಂಖ್ಯೆ 10560/2022

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago