ರಾಜ್ಯ

ಎಸ್‌ಟಿಪಿ ಘಟಕಕ್ಕೆ ಭೂಮಿ : ಸಂಪುಟದ ಹೆಗಲಿಗೆ ಪರಿಹಾರ ಹೆಚ್ಚಳ ಜವಾಬ್ದಾರಿ

ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ನೀಡಿರುವ ಭೂಮಾಲೀಕರಿಗೆ ಪರಿಹಾರವನ್ನು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲು ಮೂವರು ಸಚಿವರು ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ, ಆರ್ಥಿಕ ಮತ್ತು ನಗರ ನೀರು ಸರಬರಾಜು ಇಲಾಖೆ ಉನ್ನತಾಧಿಕಾರಿಗಳ ಸಭೆ ನಡೆಯಿತು.

ಬೆಳಗಾವಿ ನಗರದಲ್ಲಿ 70 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಹಲಗಾ ಗ್ರಾಮದ 17 ಎಕರೆ 37 ಗುಂಟೆ ಮತ್ತು ಬೆಳಗಾವಿಯ 1 ಎಕರೆ ಮತ್ತು 12 ಗುಂಟೆ ಜಮೀನನ್ನು ವಶಪಡಿಸಿಕೊಳ್ಳಲಾಗಿತ್ತು. ಹತ್ತು ವರ್ಷಗಳ ಹಿಂದೆ ಒಟ್ಟು 19 ಎಕರೆ 9 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಅದಕ್ಕೆ ಪರಿಹಾರವನ್ನೂ ಘೋಷಣೆ ಮಾಡಲಾಗಿತ್ತು. ಆದರೆ, ಅಂದು ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ಭೂಮಾಲೀಕರು ಒಪ್ಪದ ಕಾರಣ ನ್ಯಾಯಾಲಯದಲ್ಲಿ ಪರಿಹಾರದ ಮೊತ್ತವನ್ನು ಜಮಾ ಮಾಡಲಾಗಿತ್ತು. ಅಲ್ಲದೇ, ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ಕ್ರಮಬದ್ಧವಾಗಿದೆ ಎಂದು ರಾಜ್ಯ ಹೈಕೋರ್ಟ್ ಸರ್ಕಾರದ ಪರವಾಗಿ ತೀರ್ಪು ನೀಡಿತ್ತು.

ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಅವರು, ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಮೀನು ನೀಡಿರುವ ರೈತರ ಬಗ್ಗೆ ತಮಗೆ ಮತ್ತು ಸರ್ಕಾರಕ್ಕೆ ಸಹಾನುಭೂತಿ ಇದೆ. ರೈತರ ಹಿತರಕ್ಷಣೆ ಜೊತೆ ಜೊತೆಯಲ್ಲೇ ಬೆಳಗಾವಿ ನಗರದ ನೈರ್ಮಲ್ಯ ಕಾಪಾಡುವುದೂ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿಯಮಾವಳಿಯಲ್ಲಿ ಅವಕಾಶವಿದ್ದರೆ ಪರಿಹಾರ ಹೆಚ್ಚಳ ಮಾಡಬಹುದಾಗಿದೆ ಎಂದರು.

ಇದೇ ವೇಳೆ, ಅಧಿಕಾರಿಗಳು ಹತ್ತು ವರ್ಷಗಳಿಗೂ ಹಿಂದೆಯೇ ಪರಿಹಾರ ಘೋಷಣೆ ಮಾಡಿರುವುದರಿಂದ ಮತ್ತೆ ಪರಿಷ್ಕರಣೆ ಮಾಡಲು ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ, ಎಸ್ ಟಿಪಿ ಘಟಕವನ್ನು ಸ್ಥಾಪನೆ ಮಾಡದಿದ್ದರೆ ನಾಗರಿಕರು ಮಲಿನ ನೀರನ್ನು ಬಳಸಬೇಕಾಗುತ್ತದೆ. ತ್ವರಿತವಾಗಿ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಮತ್ತು ಪರಿಹಾರ ಹೆಚ್ಚಳದ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯ ಮುಂದಿಟ್ಟು ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ತಮ್ಮ ಮತಕ್ಷೇತ್ರದ ರೈತರು ಜಮೀನನ್ನು ನೀಡಿದ್ದಾರೆ. ಅವರಿಗೆ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದರು.

ಸಚಿವ ಸಂಪುಟ ಸಭೆಗೆ ಹೊಣೆ: ಸಚಿವರಾದ ಸುರೇಶ್ ಅವರು, ಇದೊಂದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ನಿಯಮಾವಳಿಯಲ್ಲಿ ಪರಿಹಾರ ಹೆಚ್ಚಳಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಪರಿಹಾರ ಹೆಚ್ಚಳದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆರ್ಥಿಕ ಇಲಾಖೆ (ವೆಚ್ಚ) ಕಾರ್ಯದರ್ಶಿ ರೇಜು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago