ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿ, ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ನ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ದೂರು ನೀಡಿದ್ದು, ದೂರಿನ ಪ್ರತಿಯನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ಮಾಡಿಕೊಂಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ಗಳನ್ನು ಮಾಡಿರು ಲಕ್ಕಿ ಅಲಿ, ಈ ಬಗ್ಗೆ ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಯಲಹಂಕ ನ್ಯೂಟೌನ್ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್, ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…