ರಾಜ್ಯ

ರೋಹಿಣಿ ಸಿಂಧೂರಿ ವಿರುದ್ಧ ಭೂ ಕಬಳಿಕೆ ಆರೋಪ; ಖ್ಯಾತ ಗಾಯಕರಿಂದ ಲೋಕಯುಕ್ತಕ್ಕೆ ದೂರು

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿ, ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರಿನ ನ್ಯೂ ಯಲಹಂಕ ಟೌನ್‌ ಬಳಿ ಇರುವ ಟ್ರಸ್ಟ್‌ನ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ದೂರು ನೀಡಿದ್ದು, ದೂರಿನ ಪ್ರತಿಯನ್ನು ತಮ್ಮ ಟ್ವೀಟರ್‌ ಖಾತೆಯಲ್ಲಿ ಶೇರ್‌ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿರು ಲಕ್ಕಿ ಅಲಿ, ಈ ಬಗ್ಗೆ ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್, ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

11 hours ago