ಚಿತ್ರದುರ್ಗ-:ಅಹಿತಕರ ಮತ್ತು ಅನಾರೋಗ್ಯಕರ ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸುತ್ತೇವೆ. ಈ ನೆಲದ ಕಾನೂನನ್ನು ಗೌರವಿಸುತ್ತೇವೆ. ಪಲಾಯನ ಮಾಡದೆ ಸಮಸ್ಯೆಯಿಂದ ಹೊರ ಬರುತ್ತೇವೆ ಎಂದು ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘ ರಾಜೇಂದ್ರ ಶರಣರು ಹೇಳಿದ್ದಾರೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಶ್ರೀಗಳು 2-3 ದಿನಗಳ ಬಳಿಕ ಶ್ರೀಮಠದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡು ತಮ್ಮ ಭಕ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಇದಕ್ಕೂ ಮೊದಲು ಶ್ರೀಗಳು ತಲೆ ಮರೆಸಿಕೊಂಡಿದ್ದಾರೆ. ಮಹಾರಾಷ್ಟ್ರದತ್ತ ಪಲಾಯನವಾಗುತ್ತಿದ್ದಾರೆ ಎಂಬೆಲ್ಲಾ ವದಂತಿಗಳು ಹರಡಿದ್ದವು. ಆದರೆ, ಹಾವೇರಿಯಿಂದ ಚಿತ್ರದುರ್ಗಕ್ಕೆ ಪೆÇಲೀಸ್ ಬಿಗಿ ಭದ್ರತೆಯಲ್ಲಿ ಆಗಮಿಸಿದ ಶ್ರೀಗಳು ಸಾರ್ವಜನಿಕರನ್ನು ಉದ್ದೇಶಿಸಿ ನಗುಮುಖದಲ್ಲೇ ಮಾತನಾಡಿದರು.
ನಿಮ್ಮೆಲ್ಲರ ಸಲುವಾಗಿ ನಾನು ಧೈರ್ಯವಾಗಿದ್ದೇನೆ. ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಎದುರಾಗಿರುವ ಸಂದರ್ಭವನ್ನು ಧೈರ್ಯವಾಗಿ ಸಹನೆ ಮತ್ತು ಬುದ್ದಿವಂತಿಕೆಯಿಂದ ಎದುರಿಸೋಣ. ಸರ್ವಜನರ ಸಹಕಾರದಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.
ತಮ್ಮ ವಿರುದ್ಧ 15 ವರ್ಷಗಳಿಂದಲೂ ಪಿತೂರಿ ನಡೆಯುತ್ತಲೇ ಇದೆ. ಈ ಮೊದಲು ಮಠದ ಒಳಗೆ ನಡೆಯುತ್ತಿತ್ತು. ಈಗ ಹೊರಗೂ ನಡೆಯುತ್ತಿದೆ. ಇದಕ್ಕೆಲ್ಲಾ ತಾರ್ಕಿಕ ಅಂತ್ಯಕಾಣಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ಕೊಡಬೇಕೆಂದು ಮನವಿ ಮಾಡಿದರು.
ತಾವು ಈ ನೆಲದ ಕಾನೂನನ್ನು ಗೌರವಿಸುವ ಮಠಾಪತಿಯಾಗಿ, ಪೀಠಾಧ್ಯಕ್ಷರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇದರಲ್ಲಿ ಪಲಾಯನವಾದ ಇಲ್ಲ. ಗಟ್ಟಿಯಾಗಿ ಸ್ಥಿರವಾಗಿ ನಿಂತು ಮಾತನಾಡುತ್ತೇನೆ. ಸಾರ್ವಜನಿಕರು, ಅಭಿಮಾನಿಗಳು ಅನಗತ್ಯವಾಗಿ ಹರಡುವ ವದಂತಿ, ಊಹಾಪೆÇೀಹಗಳನ್ನು ನಂಬಬಾರದು ಎಂದು ಹೇಳಿದರು.
ಮುರುಘಾ ಮಠ ಒಂದು ಕಾಲದಲ್ಲಿ ಚಲಿಸುವ ನ್ಯಾಯಾಲಯವಾಗಿತ್ತು. ನಾವು ನ್ಯಾಯಬದ್ಧವಾಗಿದ್ದೇವೆ. ಎಲ್ಲಾ ಸಮುದಾಯಗಳಿಗೂ ಒಳ್ಳೆಯದನ್ನು ಬಯಸುತ್ತೇವೆ, ಏನೋ ಒಂದು ಅಹಿತಕರ, ಅನಾರೋಗ್ಯಕರ ಸಂದರ್ಭ ಸೃಷ್ಟಿಯಾಗಿದೆ. ಅದರಿಂದ ಹೊರಗೆ ಬಂದೇ ಬರುತ್ತೇವೆ ಎಂಬ ವಿಶ್ವಾಸವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಲಕ್ಷಾಂತರ ಜನ ಶ್ರೀಮಠಕ್ಕೆ ಬರುತ್ತಿದ್ದಾರೆ. ಅವರ ಅಭಿಮಾನ, ನೋವು ನನಗೆ ಅರ್ಥವಾಗುತ್ತಿದೆ. ಇದನ್ನೆಲ್ಲಾ ನೋಡಿದ ಮೇಲೆ ನನಗೆ ಧೈರ್ಯ ಹೆಚ್ಚಾಗಿದೆ. ಹೆದರುವ ಅಗತ್ಯವಿಲ್ಲ ಎನ್ನಿಸಿದೆ. ಶ್ರೀಮಠದ ಮೇಲಿನ ಅಭಿಮಾನ ಚಿಮ್ಮಿಸಲು ಕಾರಣಕರ್ತರಾದವರಿಗೆ ಒಂದು ಸೆಲ್ಯೂಟ್ ಎಂದು ಶ್ರೀಗಳು ತಿಳಿಸಿದರು.
ಬಳಿಕ ಶ್ರೀಮಠದಲ್ಲಿ ಶರಣರ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆ ನಡೆಯಿತು. ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು.
ಇದಕ್ಕೂ ಮೊದಲು ಶ್ರೀಗಳು ತಲೆ ಮರೆಸಿಕೊಂಡಿದ್ದಾರೆ. ಮಹಾರಾಷ್ಟ್ರದತ್ತ ಪಲಾಯನವಾಗುತ್ತಿದ್ದಾರೆ ಎಂಬೆಲ್ಲಾ ವದಂತಿಗಳು ಹರಡಿದ್ದವು. ಆದರೆ, ಹಾವೇರಿಯಿಂದ ಚಿತ್ರದುರ್ಗಕ್ಕೆ ಪೆÇಲೀಸ್ ಬಿಗಿ ಭದ್ರತೆಯಲ್ಲಿ ಆಗಮಿಸಿದ ಶ್ರೀಗಳು ಸಾರ್ವಜನಿಕರನ್ನು ಉದ್ದೇಶಿಸಿ ನಗುಮುಖದಲ್ಲೇ ಮಾತನಾಡಿದರು.
ನಿಮ್ಮೆಲ್ಲರ ಸಲುವಾಗಿ ನಾನು ಧೈರ್ಯವಾಗಿದ್ದೇನೆ. ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಎದುರಾಗಿರುವ ಸಂದರ್ಭವನ್ನು ಧೈರ್ಯವಾಗಿ ಸಹನೆ ಮತ್ತು ಬುದ್ದಿವಂತಿಕೆಯಿಂದ ಎದುರಿಸೋಣ. ಸರ್ವಜನರ ಸಹಕಾರದಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.
ತಮ್ಮ ವಿರುದ್ಧ 15 ವರ್ಷಗಳಿಂದಲೂ ಪಿತೂರಿ ನಡೆಯುತ್ತಲೇ ಇದೆ. ಈ ಮೊದಲು ಮಠದ ಒಳಗೆ ನಡೆಯುತ್ತಿತ್ತು. ಈಗ ಹೊರಗೂ ನಡೆಯುತ್ತಿದೆ. ಇದಕ್ಕೆಲ್ಲಾ ತಾರ್ಕಿಕ ಅಂತ್ಯಕಾಣಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕಾರ ಕೊಡಬೇಕೆಂದು ಮನವಿ ಮಾಡಿದರು.
ತಾವು ಈ ನೆಲದ ಕಾನೂನನ್ನು ಗೌರವಿಸುವ ಮಠಾಪತಿಯಾಗಿ, ಪೀಠಾಧ್ಯಕ್ಷರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಇದರಲ್ಲಿ ಪಲಾಯನವಾದ ಇಲ್ಲ. ಗಟ್ಟಿಯಾಗಿ ಸ್ಥಿರವಾಗಿ ನಿಂತು ಮಾತನಾಡುತ್ತೇನೆ. ಸಾರ್ವಜನಿಕರು, ಅಭಿಮಾನಿಗಳು ಅನಗತ್ಯವಾಗಿ ಹರಡುವ ವದಂತಿ, ಊಹಾಪೆÇೀಹಗಳನ್ನು ನಂಬಬಾರದು ಎಂದು ಹೇಳಿದರು.
ಮುರುಘಾ ಮಠ ಒಂದು ಕಾಲದಲ್ಲಿ ಚಲಿಸುವ ನ್ಯಾಯಾಲಯವಾಗಿತ್ತು. ನಾವು ನ್ಯಾಯಬದ್ಧವಾಗಿದ್ದೇವೆ. ಎಲ್ಲಾ ಸಮುದಾಯಗಳಿಗೂ ಒಳ್ಳೆಯದನ್ನು ಬಯಸುತ್ತೇವೆ, ಏನೋ ಒಂದು ಅಹಿತಕರ, ಅನಾರೋಗ್ಯಕರ ಸಂದರ್ಭ ಸೃಷ್ಟಿಯಾಗಿದೆ. ಅದರಿಂದ ಹೊರಗೆ ಬಂದೇ ಬರುತ್ತೇವೆ ಎಂಬ ವಿಶ್ವಾಸವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಲಕ್ಷಾಂತರ ಜನ ಶ್ರೀಮಠಕ್ಕೆ ಬರುತ್ತಿದ್ದಾರೆ. ಅವರ ಅಭಿಮಾನ, ನೋವು ನನಗೆ ಅರ್ಥವಾಗುತ್ತಿದೆ. ಇದನ್ನೆಲ್ಲಾ ನೋಡಿದ ಮೇಲೆ ನನಗೆ ಧೈರ್ಯ ಹೆಚ್ಚಾಗಿದೆ. ಹೆದರುವ ಅಗತ್ಯವಿಲ್ಲ ಎನ್ನಿಸಿದೆ. ಶ್ರೀಮಠದ ಮೇಲಿನ ಅಭಿಮಾನ ಚಿಮ್ಮಿಸಲು ಕಾರಣಕರ್ತರಾದವರಿಗೆ ಒಂದು ಸೆಲ್ಯೂಟ್ ಎಂದು ಶ್ರೀಗಳು ತಿಳಿಸಿದರು.
ಬಂದಿರುವ ಸಂದರ್ಭವನ್ನು ಧೈರ್ಯವಾಗಿ ಎದುರಿಸುತ್ತೇನೆ. ಸಮಸ್ಯೆ ನಿವಾರಣೆ ಮಾಡುವ ಪ್ರಯತ್ನ ಮಾಡುತ್ತೇನೆ. ಇದು ಸಂಕಷ್ಟದ ಸಮಯವಾಗಿದೆ. ಯಾರಿಗೂ ಆತಂಕ ಬೇಡ. ಎಲ್ಲರೂ ಧೈರ್ಯ ಸಹನೆಯಿಂದ ಇರಿ ಎಂದು ಮನವಿ ಮಾಡಿಕೊಂಡರು.
ಬುದ್ಧಿವಂತಿಕೆಯಿಂದ ಸಮಸ್ಯೆ ಎದುರಿಸಬೇಕು. ಮಠದ ಭಕ್ತರು ಸಹಕರಿಸಬೇಕು. ಈ ವಿಚಾರದಲ್ಲಿ ಯಾವುದೇ ಪಲಾಯನವಾದವಿಲ್ಲ. ಮಠದ ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗೆ ಬಂದಿದೆ. ಈ ನೆಲದ ಕಾನೂನನ್ನು ಗೌರವಿಸಬೇಕು. ಇಂತಹ ಸಂದರ್ಭಗಳು ಇದೇ ಮೊದಲೇನು ಅಲ್ಲ. ಹೀಗಾಗಿ ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಶ್ರೀಗಳು ತಿಳಿಸಿದರು.
ಅಜ್ಞಾತ ಸ್ಥಳದಿಂದ ಶ್ರೀಗಳು ಮಠಕ್ಕೆ ಆಗಮಿಸುತ್ತಿದ್ದಂತೆಯೇ ಭಕ್ತರು ಶ್ರೀಗಳ ಪರ ಘೋಷಣೆ ಕೂಗಿದರು. ಇನ್ನು ಯಾವುದೇ ಅಹಿತರ ಘಟನೆ ನಡೆಯದಂತೆ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಬಳಿಕ ಶ್ರೀಮಠದಲ್ಲಿ ಶರಣರ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಮುಖಂಡರ ಸಭೆ ನಡೆಯಿತು. ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Next Article ಮುರುಘಾ ಶರಣರ ಬಂಧನಕ್ಕೆ ಕ್ಷಣಗಣನೆ ?