ರಾಜ್ಯ

ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡ್‌ಗೂ ಸಂದಾಯ ಆಗಿರಬಹುದು: ಸಿ.ಟಿ.ರವಿ ಸಂಶಯ

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಕೊಡುವ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಇದ್ದಾಗ ಪ್ರಸ್ತಾವನೆ ಬಂದಿತ್ತು. ನಾವೆಲ್ಲರೂ ಒಳಗಡೆಯೂ ವಿರೋಧ ಮಾಡಿದ್ದೆವು. ಕಾಂಗ್ರೆಸ್‌ನವರು ಬಹಿರಂಗವಾಗಿ ಮಾರಾಟವನ್ನು ವಿರೋಧಿಸಿದ್ದರು. ಇದು ದೊಡ್ಡ ಪ್ರಮಾಣದ ಕಿಕ್‌ ಬ್ಯಾಕ್‌ ಎಂದು ನಮ್ಮ ಮೇಲೆ ಕಾಂಗ್ರೆಸ್‌ನವರು ಆರೋಪಿಸಿದ್ದರು. ಒಂದು ಎಕರೆಗೆ 1.22ಲಕ್ಷ ರೂ ಕೊಡುವುದು ಎಂದರೇನು ಎಂಬ ಮಾತನ್ನು ನಮ್ಮ ಮೇಲೆ ಆರೋಪಿಸಿದರು. ಆಗ ಆರೋಪಿಸಿದವರೇ ಭೂಮಿ ಕೊಟ್ಟಿದ್ದಾರೆ. ಹಾಗಿದ್ದರೆ ನೀವು ಎಷ್ಟು ಕಿಕ್‌ ಬ್ಯಾಕ್‌ ಪಡೆದಿದ್ದೀರಿ ಎಂದು ಪ್ರಶ್ನೆ ಮಾಡಿದರು.

ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರದಲ್ಲಿ ಕೊಡಬೇಕು. ಅಲ್ಲಿರುವ ಅದಿರು ನಿಕ್ಷೇಪಗಳ ಮೇಲೆ ಸರ್ಕಾರದ ಹಕ್ಕು ಎಂದು ಷರತ್ತಿನೊಂದಿಗೆ ಕೊಡಬೇಕು. ಹಾಗಾಗಿ ನಿರ್ಧಾರವನ್ನು ಪುನರ್‌ ಪರಿಶೀಲನೆ ಮಾಡಬೇಕೆಂದು ತಿಳಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

43 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

3 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

3 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

3 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

5 hours ago