ಬೆಂಗಳೂರು: ಈ ಹಿಂದೆ ಜಿಂದಾಲ್ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ 3677 ಎಕರೆ ಭೂಮಿ ಕೊಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಆಡಳಿತದಲ್ಲಿ ಇದ್ದಾಗ ಪ್ರಸ್ತಾವನೆ ಬಂದಿತ್ತು. ನಾವೆಲ್ಲರೂ ಒಳಗಡೆಯೂ ವಿರೋಧ ಮಾಡಿದ್ದೆವು. ಕಾಂಗ್ರೆಸ್ನವರು ಬಹಿರಂಗವಾಗಿ ಮಾರಾಟವನ್ನು ವಿರೋಧಿಸಿದ್ದರು. ಇದು ದೊಡ್ಡ ಪ್ರಮಾಣದ ಕಿಕ್ ಬ್ಯಾಕ್ ಎಂದು ನಮ್ಮ ಮೇಲೆ ಕಾಂಗ್ರೆಸ್ನವರು ಆರೋಪಿಸಿದ್ದರು. ಒಂದು ಎಕರೆಗೆ 1.22ಲಕ್ಷ ರೂ ಕೊಡುವುದು ಎಂದರೇನು ಎಂಬ ಮಾತನ್ನು ನಮ್ಮ ಮೇಲೆ ಆರೋಪಿಸಿದರು. ಆಗ ಆರೋಪಿಸಿದವರೇ ಭೂಮಿ ಕೊಟ್ಟಿದ್ದಾರೆ. ಹಾಗಿದ್ದರೆ ನೀವು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದೀರಿ ಎಂದು ಪ್ರಶ್ನೆ ಮಾಡಿದರು.
ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರದಲ್ಲಿ ಕೊಡಬೇಕು. ಅಲ್ಲಿರುವ ಅದಿರು ನಿಕ್ಷೇಪಗಳ ಮೇಲೆ ಸರ್ಕಾರದ ಹಕ್ಕು ಎಂದು ಷರತ್ತಿನೊಂದಿಗೆ ಕೊಡಬೇಕು. ಹಾಗಾಗಿ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕೆಂದು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…