ರಾಜ್ಯ

ಮಂಗಳೂರು | ಭಾರೀ ಮಳೆಗೆ ಗುಡ್ಡ ಕುಸಿತ ; ನಾಲ್ವರ ಸಾವು

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ.

ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಇತ್ತಲಕೋಡಿ ಕೊಪ್ಪಲ ಗುಡ್ಡ ಕುಸಿದು ವಾಸದ ಮನೆ ಮೇಲೆ ಬಿದ್ದಿದೆ. ಮನೆಯಲ್ಲಿ ಕಾಂತಪ್ಪ, ಪತ್ನಿ ಪ್ರೇಮಪೂಜಾರಿ, ಸೀತಾರಾಮ ಪೂಜಾರಿ, ಇವರ ಪತ್ನಿ ಅಶ್ವಿನಿ, ಮಕ್ಕಳಾದ ಪುತ್ರ ಆರ್ಯನ್, ಪುತ್ರಿ ಅರುಷಾ ಇದ್ದರು. ಬೆಳಗಿನಜಾವ 4 ಗಂಟೆ ಸುಮಾರಿಗೆ ಗುಡ್ಡ ಕುಸಿದು ಎರಡು ಬೃಹತ್ ಮರಗಳ ಸಮೇತ ಮನೆಯ ಮೇಲೆ ಬಿದ್ದಿದೆ. ಸುಮಾರು 6 ಗಂಟೆ ವೇಳೆಗೆ ಇದು ಸ್ಥಳೀಯರ ಗಮನಕ್ಕೆ ಬಂದಿದೆ.

ಗುಡ್ಡ ಕುಸಿದು ಮನೆ ಮೇಲೆ ಬೀಳುವುದನ್ನು ಗ್ರಹಿಸಿದ ಮನೆಯ ಯಜಮಾನ ಕಾಂತಪ್ಪ ಹೊರಗೆ ಓಡಿಬರುವ ಹಂತದಲ್ಲಿ ಅವಶೇಷಗಳಡಿ ಸಿಲುಕಿದ್ದಾರೆ. ಅವರನ್ನು ಸ್ಥಳೀಯರು ಪತ್ತೆಹಚ್ಚಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಂತಪ್ಪ ಅವರ ಪತ್ನಿ ಪ್ರೇಮ ಪೂಜಾರಿ(52) ಅವಶೇಷಗಳಡಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಶ್ವಿನಿ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮಲಗಿದ್ದ ವೇಳೆ ಅವರ ಮೇಲೆ ಮನೆ ಕುಸಿದಿದ್ದು, ಮೇಲ್ಚಾವಣಿಯ ಬೀಮ್ ಅಶ್ವಿನಿಯವರ ಸೊಂಟದ ಭಾಗದ ಮೇಲೆ ಅಪ್ಪಳಿಸಿದೆ. ಹೀಗಾಗಿ ಆಕೆ ಹೊರಬರಲಾಗದೆ ಸಿಲುಕಿಕೊಂಡಿದ್ದರು. ಮನೆ ಕುಸಿಯುವ ವೇಳೆಯಲ್ಲಿ ಮಕ್ಕಳಿಗೆ ಹಾನಿಯಾಗದಂತೆ ತನ್ನ ದೇಹ ಮತ್ತು ಕೈಗಳನ್ನು ಅಡ್ಡಲಾಗಿ ಇಟ್ಟು ಜೀವ ಉಳಿಸುವ ಪ್ರಯತ್ನ ಮಾಡಿ ಮಾತೃ ಹೃದಯ ಪ್ರದರ್ಶಿಸಿದ್ದಾರೆ.

ಮುಂಜಾನೆ ಸ್ಥಳೀಯರು ಬಂದು ನೋಡಿದಾಗ ಮೂರು ವರ್ಷದ ಆರ್ಯನ್ಗೆ ಯಾವುದೇ ಚಲನೆ ಇರಲಿಲ್ಲ. ತಾಯಿಯ ಮತ್ತೊಂದು ಮಗ್ಗಲುನಲ್ಲಿದ್ದ ಮಗು ಅರುಷಾ ಕೈಗಳನ್ನು ಅಲುಗಾಡಿಸುತ್ತಿತ್ತು. ಸ್ಥಳೀಯರು ಅಶ್ವಿನಿ ಹಾಗೂ ಮಕ್ಕಳನ್ನು ರಕ್ಷಿಸುವ ಪ್ರಯತ್ನ ಮಾಡಿದ್ದರು. ಆದರೆ ಅದು ಕಷ್ಟಸಾಧ್ಯವಾಗಿತ್ತು. ಈ ವೇಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ಅಶ್ವಿನಿ ತನಗಿಂತ ಮೊದಲು ತನ್ನ ಮಕ್ಕಳನ್ನು ಕಾಪಾಡಿ ಎಂದು ಕೇಳಿಕೊಂಡಿದ್ದಾರೆ. ತಾಯಿಯ ಪಕ್ಕದಲ್ಲಿದ್ದ ಮಗು ತನ್ನ ಎರಡೂ ಕೈಗಳನ್ನು ಅಲುಗಾಡಿಸುತ್ತಿತ್ತು. ಈ ದೃಶ್ಯ ಕರುಳು ಹಿಂಡುವಂತಿತ್ತು. ಕಣ್ಣೆದುರಿಗೆ ತಾಯಿ, ಮಕ್ಕಳು ನರಳಾಡುತ್ತಿದ್ದರೂ ರಕ್ಷಿಸಲಾಗದೆ ಸ್ಥಳೀಯರು ಕಣ್ಣೀರು ಹಾಕುತ್ತಿದ್ದರು. ಮನಕಲುಕುವ ಈ ದೃಶ್ಯ ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಎಸ್.ಡಿಆರ್.ಎಫ್ ಸಿಬ್ಬಂದಿಗಳು ಭಾವೋದ್ವೇಗಕ್ಕೆ ಒಳಗಾಗುವಂತೆ ಮಾಡಿತ್ತು.

ಕಾರ್ಯಾಚರಣೆ ಬಳಿಕ ಆರ್ಯನ್ ಮೃತದೇಹವನ್ನು ಹೊರತೆಗೆಯಲಾಗಿದೆ. ಅಶ್ವಿನಿ ಮತ್ತು ಅರುಷಾ ಅವರ ರಕ್ಷಣಾ ಕಾರ್ಯ ಮಧ್ಯಾಹ್ನದವರೆಗೂ ನಡೆಯಿತು. ಕೊನೆಗೂ ತಾಯಿ-ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ಸಿಬ್ಬಂದಿಗಳು ಯಶಸ್ವಿಯಾದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅರುಷಾ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಹೆಚ್ಚಿದೆ. ಮಕ್ಕಳಿಬ್ಬರನ್ನು ಕಳೆದುಕೊಂಡು ತಾಯಿ ಆಸ್ಪತ್ರೆ ಯಲ್ಲಿ ಕಣ್ಣೀರು ಹಾಕಿದ್ದಾರೆ.

ಸ್ಥಳೀಯರಾದ ಆಸೀಫ್ ನೀಡಿರುವ ಮಾಹಿತಿ ಪ್ರಕಾರ, ಮನೆಯ ಯಜಮಾನ ಕಾಂತಪ್ಪ ಅವರನ್ನು ಹೊರಗೆ ತಂದು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರೇಮ ಪೂಜಾರಿ ಮೃತಪಟ್ಟಿದ್ದಾರೆ. ನಾವು ಸ್ಥಳಕ್ಕೆ ಬಂದಾಗ ತಾಯಿ ಇಬ್ಬರು ಮಕ್ಕಳಿಗೆ ಪ್ರಜ್ಞೆ ಇತ್ತು. ನಾವು ನೀರು ಕುಡಿಸಿ ಉಪಚರಿಸಿದವು. ತಾಯಿ ಪ್ರಜ್ಞೆ ತಪ್ಪುವ ಮುನ್ನ ಆಕೆಯನ್ನು ರಕ್ಷಿಸಲು ಯತ್ನಿಸಿದೆವು. ಆಗ ಅಶ್ವಿನಿ ಅವರು ನನ್ನನ್ನು ಬಿಡಿ.. ಮಗುವನ್ನು ತೆಗೆದುಕೊಳ್ಳಿ.. ದೊಡ್ಡ ಮಗ ಎಲ್ಲಿದ್ದಾನೆ. ಪತಿ ಎಲ್ಲಿದ್ದಾರೆ ಎಂದು ಕೇಳುತ್ತಿದ್ದರು. ಒಂದೂವರೆ ವರ್ಷದ ಮಗು ಕೈಯಾಡಿಸುತ್ತಿತ್ತು. ಅದನ್ನು ರಕ್ಷಿಸುವ ಪ್ರಯತ್ನ ಮಾಡಿದವು. ಆದರೆ ಸಾಧ್ಯವಾಗಲಿಲ್ಲ, ಸ್ವಲ್ಪ ಹೆಚ್ಚುಕಮ್ಮಿಯಾದರೂ ಅವಶೇಷ ಕುಸಿದು ಜೀವಹಾನಿ ಆಗುವ ಆತಂಕ ಇತ್ತು ಎಂದು ಬಿಕ್ಕಳಿಸಿದ್ದಾರೆ.

ಕಾರ್ಯಾಚರಣೆ ವಿಳಂಬ
ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯ ವಿಳಂಬವಾಗಿತ್ತು. ತೋಟದಲ್ಲಿ ಕಾಂತಪ್ಪನವರು ಮನೆ ನಿರ್ಮಿಸಿಕೊಂಡಿದ್ದರಿಂದಾಗಿ ಅಲ್ಲಿಗೆ ದೊಡ್ಡ ಪ್ರಮಾಣದ ಜೆಸಿಬಿ, ಇಟಾಚಿ ಅಥವಾ ಅರ್ಥ ಮೂವರ್ಗಗಳನ್ನು ತೆಗೆದುಕೊಂಡು ಹೋಗಲು ಕಷ್ಟವಾಗಿತ್ತು. ಎಸ್‍ಡಿಆರ್‌ಎಫ್ ಸಿಬ್ಬಂದಿಗಳು ಎರಡೂವರೆ ಕಿ.ಮೀ ದೂರ ಕಾರ್ಯಾಚರಣೆಯ ಸಲಕರಣೆಗಳನ್ನು ಹೊತ್ತು ಸಾಗಿಸಬೇಕಾಯಿತು. ಜೊತೆಗೆ ತಾಯಿ, ಮಕ್ಕಳು ಬದುಕಿದ್ದರಿಂದ ಕಾರ್ಯಚರಣೆ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯಲ್ಲಿತ್ತು. ಸ್ವಲ್ಪ ವ್ಯತ್ಯಾಸವಾದರೂ ಅವಶೇಷಗಳಡಿ ಸಿಲುಕಿರುವ ತಾಯಿ-ಮಗುವಿನ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು. ಹೀಗಾಗಿ ಅತ್ಯಂತ ಸಂಕೀರ್ಣ ಹಾಗೂ ಸೂಕ್ಷ್ಮ ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಬೇಕಾಗಿತ್ತು. ರಕ್ಷಣಾ ಕಾರ್ಯಚರಣೆ ಸಿಬ್ಬಂದಿಗಳು ಬೃಹತ್ ಮರಗಳನ್ನು ಕತ್ತರಿಸಿ ಅವಶೇಷಗಳಡಿ ಸಿಲುಕಿದ್ದ ತಾಯಿ-ಮಕ್ಕಳನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಆರುಷಾ ಮೃತಪಟ್ಟಿದೆ.

ಸಿಎಂ ಆದೇಶ ;
ಭೂಕುಸಿತದ ಹಿನ್ನಲೆಯಲ್ಲಿ ತಕ್ಷಣ ಸ್ಥಳಕ್ಕೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ರಾತ್ರಿ ಬಿದ್ದ ಮಳೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ. ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ದ.ಕ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

7 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

9 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

10 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

10 hours ago