ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ,
ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಹಲವೆಡೆ ಗುಡ್ಡ ಕುಸಿಯುತ್ತಿವೆ. ಮೊನ್ನೆ(ಜು.16) ತಾನೆ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರದ ದೊಡ್ಡತಪ್ಲು ಗ್ರಾಮದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಲು ಗ್ರಾಮದ ಬಳಿ ಬುಧವಾರ(ಜು.17) ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನ ಮೇಲೆ ಭಾರಿ ಪ್ರಮಾಣದ ಮಣ್ಣು ಬಿದ್ದಿದೆ. ಅದರಲ್ಲಿದ್ದ ಇಬ್ಬರು ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬುಧವಾರ ಮಧ್ಯಾಹ್ನದಿಂದಲೇ ಈ ಭಾಗದಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿತ್ತು. ಆಗ ಕೆಲಕಾಲ ಸಂಚಾರ ನಿರ್ಭಂಧ ವಿಧಿಸಿ, ಮಣ್ಣು ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಹೀಗಿರುವಾಗಲೇ ಮತ್ತೆ ತಡರಾತ್ರಿ ಭಾರಿ ಪ್ರಮಾಣದ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ತುಂಬೆಲ್ಲಾ ಮಣ್ಣು ತುಂಬಿದ್ದು, ಸುತ್ತಮುತ್ತ ಎರಡು ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವು ಕಾರ್ಯಚರಣೆ ನಡೆಯುತ್ತಿದ್ದು, ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…