Transfer of 1,300 Employees Through Counseling: Priyank Kharge
ಬೆಂಗಳೂರು : ಆರ್ಎಸ್ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಕಳೆದ 100 ವರ್ಷಗಳಿಂದ ಈ ನೋಂದಣಿಯಾಗದ ಸಂಘಟನೆ ಭಾರತದಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಪ್ರಚಾರ ಮಾಡುತ್ತಾ ಬಂದಿದೆ ಎಂದು ಆರ್ಎಸ್ಎಸ್ ವಿರುದ್ಧ ಆರೋಪ ಮಾಡಿದ್ದಾರೆ.
ಅಮೆರಿಕ ಪ್ರವಾಸದ ವೇಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು, ಯಾವುದೇ ಹಿಂದೂ, ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸಿದರೆ, ಆತ ಹಿಂದೂವಾಗಿ ಉಳಿಯುವುದಿಲ್ಲ. ಹಿಂದೂ ಎಂದು ಕರೆದುಕೊಳ್ಳುವವರು ಎಲ್ಲ ಮಾರ್ಗಗಳೂ ಒಂದೇ ಗುರಿಯತ್ತ ಸಾಗುತ್ತವೆ ಎಂಬುದನ್ನು ನಂಬಬೇಕು ಎಂಬ ಭಾಗವತ್ ಅವರ ಮಾತುಗಳನ್ನು ಪ್ರಸ್ತಾಪಿಸಿದ್ದಾರೆ. ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಇಷ್ಟೊಂದು ಬದಲಾವಣೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಭಾರತೀಯ ವಲಸಿಗರಿಂದ ಆರ್ಎಸ್ಎಸ್ ತನ್ನ ವಿಚಾರ ಪರಿವಾರಕ್ಕಾಗಿ ನಿಧಿ ಸಂಗ್ರಹಿಸಲು ವಿವಿಧ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇಂತಹ ಚಟುವಟಿಕೆಗಳು ಸಮಾಜದಲ್ಲಿ ಕೋಮು ವಿಭಜನೆಯ ಬೀಜ ಬಿತ್ತುತ್ತವೆ ಎಂದು ಟೀಕಿಸಿದ್ದಾರೆ.
ಮೋಹನ್ ಭಾಗವತ್ ಅವರ ಮೂರು ರಾಷ್ಟ್ರಗಳ ಪ್ರವಾಸ ಹಾಗೂ ಯೂನಿವರ್ಸಲ್ ಒನ್ನೆಸ್ (ಸಾರ್ವತ್ರಿಕ ಏಕತೆ) ಎಂಬ ಸಂದೇಶವನ್ನು ಕೇವಲ ಧಾರ್ಮಿಕ ಸಾಮರಸ್ಯದ ಪ್ರಯತ್ನವೆಂದು ಪರಿಗಣಿಸುವ ಮೊದಲು ಅದರ ಹಿಂದಿರುವ ಸಂಘಟನೆಗಳ ಜಾಲವನ್ನು ಗಮನಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…
ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ…
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…
ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…