ರಾಜ್ಯ

ಲತಾ ರಜನಿಕಾಂತ್‌ಗೆ ಕೋರ್ಟ್‌ ಬುಲಾವ್‌!

ಬೆಂಗಳೂರು: ಚಿತ್ರರಂಗದ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾಗಿರುವ ರಜನಿಕಾಂತ್‌ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು.

ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು.

ಇದೀಗ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ ಹಾಜರಾಗುವಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಸೂಚಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

7 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

7 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

8 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

9 hours ago