ಬೆಂಗಳೂರು: ಚಿತ್ರರಂಗದ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪತ್ನಿ ಲತಾ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು.
ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು.
ಇದೀಗ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ ಹಾಜರಾಗುವಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಸೂಚಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…