ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು ಗಮನಿಸಬೇಕು ಎಂದರು.
ಇನ್ನು ಬೀದರ್ನಲ್ಲಿ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಆವತ್ತು ಆರ್ಮ್ಡ್ ಗಾರ್ಡ್ ಇರಲಿಲ್ಲ. ಹಾಗಾಗಿ ಈ ರೀತಿ ಘಟನೆ ಸಂಭವಿಸಿದೆ. ಬ್ಯಾಂಕ್ ದರೋಡೆ ವೇಳೆ ಬ್ಯಾಂಕ್ ಭದ್ರತಾ ಸಿಬ್ಬಂದಿ ಇರಲಿಲ್ಲ. ಇದಕ್ಕೆ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳೋದು ಸರಿಯಲ್ಲ ಎಂದು ಹೇಳಿದರು.
ಇನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಲ್ಲೆಲ್ಲಿ ಇಂತಹ ಘಟನೆಗಳಾಗಿವೆ ಎಂದು ನಾನು ಅಂಕಿ-ಅಂಶ ಕೊಡುತ್ತೇನೆ. ಅವರ ಆಡಳಿತದ ಅವಧಿಯಲ್ಲಿ ಆಗಿರುವ ಘಟನೆಗಳನ್ನು ಮರೆತು ಬಿಟ್ಟಿದ್ದಾರೆ ಅನ್ನಿಸುತ್ತಿದೆ. ಅವರ ಕಾಲದಲ್ಲಿ ಎಷ್ಟು ಕೊಲೆಗಳಾಗಿದ್ದವು. ಎಷ್ಟು ರೇಪ್ ಆಗಿದ್ದವು ಎಂದು ವಿವರಣೆ ಕೊಡುತ್ತೇನೆ. ಇದೆಲ್ಲವೂ ರಾಜ್ಯದ ಜನತೆಗೆ ಗೊತ್ತಾಗಲಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…