ರಾಜ್ಯ

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಯಮ ಉಲ್ಲಂಘನೆಗಳ ಕುರಿತು ಹಿಂದಿನ ಅಧ್ಯಕ್ಷ ರಾಜೀವ್ ಅವರನ್ನು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆಗೊಳಪಡಿಸುವ ಪ್ರಸ್ತಾವಕ್ಕೆ ಕಾನೂನು ಇಲಾಖೆ
ಕೊನೆಗೂ ಅನುಮತಿ ನೀಡಿದೆ.

ಮುಡಾ ಮಾಜಿ ಅಧ್ಯಕ್ಷರಾಗಿದ್ದ ರಾಜೀವ್ ವಿರುದ್ದ ತನಿಖೆಗೆ ಒಳಪಡಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಆರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೊನೆಗೆ ಸಾಕಷ್ಟು ಆಳೆದು ತೂಗಿ ತನಿಖೆಗೆ ಕಾನೂನು ಇಲಾಖೆ ಅಸ್ತು ನೀಡಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ (ತಿದ್ದುಪಡಿ ಕಾಯ್ದೆ 2018) 1988ರ ಕಲಂ 17ರ ಅನ್ವಯ ರಾಜೀವ್ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಪಡಿಸಿದ್ದ ಬಡಾವಣೆಗಳಲ್ಲಿನ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ಈಗಾಗಲೇ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿತ್ತು. ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿತ್ತು.

ಇದಕ್ಕೂ ಮುನ್ನ ವರ್ಗಾವಣೆ ಮತ್ತು ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದ ದಿನೇಶ್ ಕುಮಾರ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಈ ಸಂಬಂಧ ದಿನೇಶ್ ಕುಮಾರ್ ವಿರುದ್ಧ ಚಾರ್ಜ್‍ಶೀಟ್ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು.

ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಧಿ ನಿರ್ವಹಣೆ ಸಂಬಂಧ ತೆರೆದಿದ್ದ ಒಟ್ಟು 23 ಬ್ಯಾಂಕ್ ಖಾತೆಗಳ ನಗದು ಪುಸ್ತಕಗಳಲ್ಲಿನ ಹಲವು ನ್ಯೂನತೆಗಳನ್ನು ರಾಜ್ಯ ಲೆಕ್ಕಪತ್ರ ಮತ್ತ ಲೆಕ್ಕ ಪರಿಶೋಧನೆ ಇಲಾಖೆಯು ಪತ್ತೆ ಹಚ್ಚಿತ್ತು. ಸಕ್ಷಮ ಅನುಮೋದನೆಯಿಲ್ಲದೆಯೇ ಹಾಗೆಯೇ ಮುಡಾದಲ್ಲಿ ಚಾಲ್ತಿಯಲ್ಲಿದ್ದ 23 ಖಾತೆಗಳಲ್ಲಿ 15 ಖಾತೆಗಳಲ್ಲಿನ ಮೊತ್ತವನ್ನು ಪ್ರಾಧಿಕಾರದ ಆಂತರಿಕ ವರ್ಗಾವಣೆ ಮಾಡಲಾಗಿತ್ತು ಎಂಬುದನ್ನೂ ಸಹ ಲೆಕ್ಕ ಪರಿಶೋಧಕರು ಬಯಲು ಮಾಡಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago