ರಾಜ್ಯ

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಯಮ ಉಲ್ಲಂಘನೆಗಳ ಕುರಿತು ಹಿಂದಿನ ಅಧ್ಯಕ್ಷ ರಾಜೀವ್ ಅವರನ್ನು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆಗೊಳಪಡಿಸುವ ಪ್ರಸ್ತಾವಕ್ಕೆ ಕಾನೂನು ಇಲಾಖೆ
ಕೊನೆಗೂ ಅನುಮತಿ ನೀಡಿದೆ.

ಮುಡಾ ಮಾಜಿ ಅಧ್ಯಕ್ಷರಾಗಿದ್ದ ರಾಜೀವ್ ವಿರುದ್ದ ತನಿಖೆಗೆ ಒಳಪಡಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಆರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೊನೆಗೆ ಸಾಕಷ್ಟು ಆಳೆದು ತೂಗಿ ತನಿಖೆಗೆ ಕಾನೂನು ಇಲಾಖೆ ಅಸ್ತು ನೀಡಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ (ತಿದ್ದುಪಡಿ ಕಾಯ್ದೆ 2018) 1988ರ ಕಲಂ 17ರ ಅನ್ವಯ ರಾಜೀವ್ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಪಡಿಸಿದ್ದ ಬಡಾವಣೆಗಳಲ್ಲಿನ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ಈಗಾಗಲೇ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿತ್ತು. ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿತ್ತು.

ಇದಕ್ಕೂ ಮುನ್ನ ವರ್ಗಾವಣೆ ಮತ್ತು ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದ ದಿನೇಶ್ ಕುಮಾರ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಈ ಸಂಬಂಧ ದಿನೇಶ್ ಕುಮಾರ್ ವಿರುದ್ಧ ಚಾರ್ಜ್‍ಶೀಟ್ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು.

ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಧಿ ನಿರ್ವಹಣೆ ಸಂಬಂಧ ತೆರೆದಿದ್ದ ಒಟ್ಟು 23 ಬ್ಯಾಂಕ್ ಖಾತೆಗಳ ನಗದು ಪುಸ್ತಕಗಳಲ್ಲಿನ ಹಲವು ನ್ಯೂನತೆಗಳನ್ನು ರಾಜ್ಯ ಲೆಕ್ಕಪತ್ರ ಮತ್ತ ಲೆಕ್ಕ ಪರಿಶೋಧನೆ ಇಲಾಖೆಯು ಪತ್ತೆ ಹಚ್ಚಿತ್ತು. ಸಕ್ಷಮ ಅನುಮೋದನೆಯಿಲ್ಲದೆಯೇ ಹಾಗೆಯೇ ಮುಡಾದಲ್ಲಿ ಚಾಲ್ತಿಯಲ್ಲಿದ್ದ 23 ಖಾತೆಗಳಲ್ಲಿ 15 ಖಾತೆಗಳಲ್ಲಿನ ಮೊತ್ತವನ್ನು ಪ್ರಾಧಿಕಾರದ ಆಂತರಿಕ ವರ್ಗಾವಣೆ ಮಾಡಲಾಗಿತ್ತು ಎಂಬುದನ್ನೂ ಸಹ ಲೆಕ್ಕ ಪರಿಶೋಧಕರು ಬಯಲು ಮಾಡಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

9 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

9 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

11 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

11 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

12 hours ago