ರಾಜ್ಯ

ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ ಸಂಬಂಧಿಸಿದಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು…

ಬೆಂಗಳೂರು :ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

1 min ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

2 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

3 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

4 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

4 hours ago