ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ.
ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಅಲ್ಲಿ ಸ್ವತಃ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರೇ ಪತ್ರದ ಮುಖಾಂತರ ಜೈಲಿನಲ್ಲಿ ಸುಮ್ಮನಿರುವಂತೆ ಶಿಸ್ತಿನ ಪಾಠ ಮಾಡಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಸೀಗರೇಟ್ ಸೇದುತ್ತಿರುವುದು ಹಾಗೂ ಕಾಫಿ ಕುಡಿಯುತ್ತಿರುವ ಭಾವಚಿತ್ರ ಭಾರಿ ಮಟ್ಟದಲ್ಲಿ ವೈರಲ್ ಆಗಿತ್ತು. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆ ದರ್ಶನ್ ಅವರನ್ನು ಬೆಂಗಳೂರಿನಿಂದ ಬಳ್ಳಾರಿಗೆ ಹಸ್ತಾಂತರ ಮಾಡುವಂತೆ ಮಾಡಿಕೊಂಡಿದ್ದರು. ಈ ಮಧ್ಯೆ ಬಳ್ಳಾರಿಯಲ್ಲಿಯೂ ಸಹ ಮಾಧ್ಯಮಗಳಿಗೆ ಅಶ್ಲೀಲ ಸನ್ನೆ ತೋರಿಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಹೀಗಾಗಿ ದರ್ಶನ್ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರಿಂದಲೇ ದುರ್ನಡತೆಯನ್ನು ಸರಿಪಡಿಸಿಕೊಳ್ಳುವಂತೆ ಕಿವಿಮಾತು ಬಂದಿದೆ ಎಂದು ಹೇಳಲಾಗಿದೆ.
ಕೆಲವು ದಿನಗಳ ಹಿಂದೆ ಅಷ್ಟೇ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 17 ಜನ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಈ ಚಾರ್ಜ್ಶಿಟ್ನಲ್ಲಿ ಪ್ರಕರಣದ ಅನೇಕ ವಿಚಾರಗಳು ಉಲ್ಲೇಖವಾಗಿದ್ದವು. ಹೀಗಿದ್ದರೂ ಇಲ್ಲಿಯವರೆಗೂ ದರ್ಶನ್ ಅವರ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಸಲ್ಲಿಸಿರಲಿಲ್ಲ. ಒಂದು ವೇಳೆ ಅವರ ಪರ ಜಾಮೀನು ಸಲ್ಲಿಕೆ ಮಾಡಿದರೆ, ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿರುವ ವಿಷಯಗಳು ಹಾಗೂ ವಿವಾದತ್ಮಕ ವಿಚಾರಗಳು ಹೈಲೈಟ್ ಆಗಿ ಜಾಮೀನಿಗೆ ತೊಂದರೆಯಾಗುತ್ತವೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಹಿಂದಿನಂತೆಯೇ ವಿವಾದತ್ಮಕ ವಿಚಾರಗಳನ್ನು ಸೃಷ್ಠಿಕೊಂಡು ಪದೇ ಪದೇ ಕಿರಿಕ್ ಮಾಡಿಕೊಂಡರೆ ಜಾಮೀನಿಗೆ ತೊಂದರೆಯಾಗುತ್ತದೆ. ಅಲ್ಲದೆ ಈ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಮಸ್ಯೆಯಾಗುತ್ತದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಈ ಪತ್ರವನ್ನು ಜೈಲು ಸಿಬ್ಬಂದಿಯೂ ದರ್ಶನ್ಗೆ ನೀಡಿದ್ದಾರೆ.
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…
ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…
ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…
ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ…
ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು…
ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ…