ರಾಜ್ಯ

ನಟ ದರ್ಶನ್‌ಗೆ ಪತ್ರದ ಮೂಲಕ ವಕೀಲರ ನೀತಿ ಪಾಠ

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ.

ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿ ಸ್ವತಃ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರೇ ಪತ್ರದ ಮುಖಾಂತರ ಜೈಲಿನಲ್ಲಿ ಸುಮ್ಮನಿರುವಂತೆ ಶಿಸ್ತಿನ ಪಾಠ ಮಾಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಸೀಗರೇಟ್‌ ಸೇದುತ್ತಿರುವುದು ಹಾಗೂ ಕಾಫಿ ಕುಡಿಯುತ್ತಿರುವ ಭಾವಚಿತ್ರ ಭಾರಿ ಮಟ್ಟದಲ್ಲಿ ವೈರಲ್‌ ಆಗಿತ್ತು. ಈ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ದರ್ಶನ್‌ ಅವರನ್ನು ಬೆಂಗಳೂರಿನಿಂದ ಬಳ್ಳಾರಿಗೆ ಹಸ್ತಾಂತರ ಮಾಡುವಂತೆ ಮಾಡಿಕೊಂಡಿದ್ದರು. ಈ ಮಧ್ಯೆ ಬಳ್ಳಾರಿಯಲ್ಲಿಯೂ ಸಹ ಮಾಧ್ಯಮಗಳಿಗೆ ಅಶ್ಲೀಲ ಸನ್ನೆ ತೋರಿಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಹೀಗಾಗಿ ದರ್ಶನ್‌ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರಿಂದಲೇ ದುರ್ನಡತೆಯನ್ನು ಸರಿಪಡಿಸಿಕೊಳ್ಳುವಂತೆ ಕಿವಿಮಾತು ಬಂದಿದೆ ಎಂದು ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅಷ್ಟೇ ರೇಣುಕಾ ಸ್ವಾಮಿ ಕೊಲೆ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸೇರಿದಂತೆ 17 ಜನ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಈ ಚಾರ್ಜ್‌ಶಿಟ್‌ನಲ್ಲಿ ಪ್ರಕರಣದ ಅನೇಕ ವಿಚಾರಗಳು ಉಲ್ಲೇಖವಾಗಿದ್ದವು. ಹೀಗಿದ್ದರೂ ಇಲ್ಲಿಯವರೆಗೂ ದರ್ಶನ್‌ ಅವರ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಸಲ್ಲಿಸಿರಲಿಲ್ಲ. ಒಂದು ವೇಳೆ ಅವರ ಪರ ಜಾಮೀನು ಸಲ್ಲಿಕೆ ಮಾಡಿದರೆ, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ವಿಷಯಗಳು ಹಾಗೂ ವಿವಾದತ್ಮಕ ವಿಚಾರಗಳು ಹೈಲೈಟ್‌ ಆಗಿ ಜಾಮೀನಿಗೆ ತೊಂದರೆಯಾಗುತ್ತವೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಹಿಂದಿನಂತೆಯೇ ವಿವಾದತ್ಮಕ ವಿಚಾರಗಳನ್ನು ಸೃಷ್ಠಿಕೊಂಡು ಪದೇ ಪದೇ ಕಿರಿಕ್‌ ಮಾಡಿಕೊಂಡರೆ ಜಾಮೀನಿಗೆ ತೊಂದರೆಯಾಗುತ್ತದೆ. ಅಲ್ಲದೆ ಈ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಮಸ್ಯೆಯಾಗುತ್ತದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಈ ಪತ್ರವನ್ನು ಜೈಲು ಸಿಬ್ಬಂದಿಯೂ ದರ್ಶನ್‌ಗೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

4 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

7 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

8 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

8 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

8 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

9 hours ago