ರಾಜ್ಯ

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿಗಳು, ಆಯುಕ್ತರು, ಮುಡಾ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದರು.

ಇದನ್ನು ಓದಿ: ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

300 ಎಕರೆ ಜಮೀನನ್ನು ಗುರುತಿಸಲಾಗಿದ್ದು, ನಿವೇಶನವನ್ನು ಸಾರ್ವಜನಿಕರಿಗೆ ಆದ್ಯತೆಗೆ ಅನುಗುಣವಾಗಿ ವಿತರಿಸುತ್ತೇವೆ ಎಂದು ತಿಳಿಸಿದರು.

ಗೃಹ ನಿರ್ಮಾಣದ ನಿವೇಶನಗಳನ್ನು ನೀಡಬೇಕೆಂಬ ಬೇಡಿಕೆ ಇದೆ. ಸೂಕ್ತವಾದ ಜಾಗವನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆವು. ಇದರಿಂದ ಈಗ 300 ಎಕರೆ ಜಮೀನು ಗುರುತಿಸಿದ್ದಾರೆ. ಇದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ವಿತರಣೆ ಮಾಡುತ್ತೇವೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ನಿವೇಶನಗಳನ್ನು ಮನಸೋ ಇಚ್ಛೆ ವಿತರಿಸಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ವಿತರಣೆ ಮಾಡುತ್ತೇವೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಕಾಯ್ದೆ 1987ರ ನಿಯಮಗಳ ಪ್ರಕಾರ ನಿಯಮ 3ರ ಅನ್ವಯ ಪ್ರಾಧಿಕಾರವು ಅಭಿವೃದ್ದಿಪಡಿಸುವ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ವೆಬ್‍ಸೈಟ್ ಮತ್ತು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

7 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

8 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

8 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

8 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

9 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

9 hours ago