ರಾಜ್ಯ

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿಗಳು, ಆಯುಕ್ತರು, ಮುಡಾ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದರು.

ಇದನ್ನು ಓದಿ: ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

300 ಎಕರೆ ಜಮೀನನ್ನು ಗುರುತಿಸಲಾಗಿದ್ದು, ನಿವೇಶನವನ್ನು ಸಾರ್ವಜನಿಕರಿಗೆ ಆದ್ಯತೆಗೆ ಅನುಗುಣವಾಗಿ ವಿತರಿಸುತ್ತೇವೆ ಎಂದು ತಿಳಿಸಿದರು.

ಗೃಹ ನಿರ್ಮಾಣದ ನಿವೇಶನಗಳನ್ನು ನೀಡಬೇಕೆಂಬ ಬೇಡಿಕೆ ಇದೆ. ಸೂಕ್ತವಾದ ಜಾಗವನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆವು. ಇದರಿಂದ ಈಗ 300 ಎಕರೆ ಜಮೀನು ಗುರುತಿಸಿದ್ದಾರೆ. ಇದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ವಿತರಣೆ ಮಾಡುತ್ತೇವೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ನಿವೇಶನಗಳನ್ನು ಮನಸೋ ಇಚ್ಛೆ ವಿತರಿಸಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ವಿತರಣೆ ಮಾಡುತ್ತೇವೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಕಾಯ್ದೆ 1987ರ ನಿಯಮಗಳ ಪ್ರಕಾರ ನಿಯಮ 3ರ ಅನ್ವಯ ಪ್ರಾಧಿಕಾರವು ಅಭಿವೃದ್ದಿಪಡಿಸುವ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ವೆಬ್‍ಸೈಟ್ ಮತ್ತು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago