ರಾಜ್ಯ

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿಗಳು, ಆಯುಕ್ತರು, ಮುಡಾ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದರು.

ಇದನ್ನು ಓದಿ: ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

300 ಎಕರೆ ಜಮೀನನ್ನು ಗುರುತಿಸಲಾಗಿದ್ದು, ನಿವೇಶನವನ್ನು ಸಾರ್ವಜನಿಕರಿಗೆ ಆದ್ಯತೆಗೆ ಅನುಗುಣವಾಗಿ ವಿತರಿಸುತ್ತೇವೆ ಎಂದು ತಿಳಿಸಿದರು.

ಗೃಹ ನಿರ್ಮಾಣದ ನಿವೇಶನಗಳನ್ನು ನೀಡಬೇಕೆಂಬ ಬೇಡಿಕೆ ಇದೆ. ಸೂಕ್ತವಾದ ಜಾಗವನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆವು. ಇದರಿಂದ ಈಗ 300 ಎಕರೆ ಜಮೀನು ಗುರುತಿಸಿದ್ದಾರೆ. ಇದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ವಿತರಣೆ ಮಾಡುತ್ತೇವೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ನಿವೇಶನಗಳನ್ನು ಮನಸೋ ಇಚ್ಛೆ ವಿತರಿಸಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ವಿತರಣೆ ಮಾಡುತ್ತೇವೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಕಾಯ್ದೆ 1987ರ ನಿಯಮಗಳ ಪ್ರಕಾರ ನಿಯಮ 3ರ ಅನ್ವಯ ಪ್ರಾಧಿಕಾರವು ಅಭಿವೃದ್ದಿಪಡಿಸುವ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ವೆಬ್‍ಸೈಟ್ ಮತ್ತು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

18 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

18 hours ago