ರಾಜ್ಯ

ಎಲ್ಲರಿಗಿಂತಾ ಮೊದಲೇ ಡಿಕೆ ಬ್ರದರ್ಸ್‌ ಕೈ ಸೇರಿತ್ತೇ ಪೆನ್‌ ಡ್ರೈವ್‌: ದೇವರಾಜೇಗೌಡ ಹೇಳಿದ್ದೇನು?

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜಲ್ಯಗಳ ವಿಡಿಯೋ ಪ್ರಕರಣಗಳ ಬಗ್ಗೆ, ಪೆನ್‌ ಡ್ರೈವ್‌ ಲೀಕ್‌ ಮಾಡಿದ್ದರು ಯಾರು ಎಂಬುದನ್ನು ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೇವರಾಜೇಗೌಡ, ಪ್ರಜ್ವಲ್‌ ಅಶ್ಲೀಲ ವಿಡಿಯೋ ವಿಚಾರ 2023 ರಲ್ಲೇ ನನ್ನ ಬಳಿ ಬಂದಿತ್ತು. ಈಗ ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳು ಬಹಿರಂಗವಾಗಿರುವುದರ ಹಿಂದೆ ನನ್ನ ಪಾತ್ರ ಇಲ್ಲ. ಆದರೆ ಪ್ರಜ್ವಲ್‌ ಈ ಬಗ್ಗೆ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಆ ಪ್ರಕರಣದಲ್ಲಿ ಪ್ರಜ್ವಲ್‌ ಕಾರು ಚಾಲಕ ಕಾರ್ತಿಕ್‌ 86ನೇ ಪ್ರತಿವಾದಿಯಾಗಿದ್ದರು. ಆತ ನನ್ನ ಬಳಿ ಬಂದು ವಕಾಲತ್ತು ವಹಿಸುವಂತೆ ಮನವಿ ಮಾಡಿದ್ದ, ಆ ವೇಳೆ ಕಕ್ಷಿದಾರನ ಪರವಾಗಿ ವಾದ ಮಂಡಿಸಬೇಕಾಗಿದ್ದರಿಂದ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ಕೇಳಿದ್ದೆ. ಆವಗಲೇ ನಾನು ಆ ವಿಡಿಯೋಗಳನ್ನು ನೋಡಿದ್ದು ಎಂದು ನಡೆದ ಘಟನೆ ಬಗ್ಗೆ ವಿವರಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಯಾರ ಯಾರ ಬಳಿ ಇದೆ ಎಂದು ನಾನು ಕಾರ್ತಿಕ್‌ ನನ್ನು ಕೇಳಿದ್ದಾಗ, ಅದನ್ನು ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್‌ ಹಾಗೂ ಡಿಕೆ ಸುರೇಶ್‌ ಸೇರಿ ಕೆಲ ಕಾಂಗ್ರೆಸ್‌ ನಾಯಕರಿಗೆ ಕಳುಹಿಸಿದ್ದೆ ಎಂದು ಹೇಳಿದ್ದ ಎಂದರು.

ಈ ವಿಚಾರವಾಗಿ ಪ್ರಧಾನ ಮೋದಿ ಹಾಗೂ ಅಮಿತ್‌ ಶಾ ಅವರಿಗೂ ಪತ್ರ ಬರೆದು ಇ-ಮೇಲ್‌ ಮಾಡಿದ್ದೆ, ಆದ್ರೆ ಇ-ಮೇಲ್‌ ಡೆಲಿವರಿ ಆಗಲಿಲ್ಲ. ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಳುಹಿಸಿದ್ದೆ. ಆದರೆ ಅವರಿಗೂ ಪತ್ರ ತಲುಪಲಿಲ್ಲ ಎಂಬುದಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago