ರಾಜ್ಯ

ವಿಧಾನಮಂಡಲ ಕಾರ್ಯಕಲಾಪ ಶುರುವಾದ ಬೆನ್ನಲ್ಲೆ ಸಭಾತ್ಯಾಗ ಮಾಡಿದ ವಿರೋಧ ಪಕ್ಷದ ನಾಯಕರು

ಬೆಂಗಳೂರು : ವಾರಾಂತ್ಯದ ಬಳಿಕ  ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು.

ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್‌ ಯುಟಿ ಖಾದರ್‌ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್‌, ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ, ಸಿಎಂ ಸಿದ್ದರಾಮಯ್ಯ ನವರು ಸಮಂಜಸ ಉತ್ತರ ನೀಡಿಲ್ಲ. ಅವರು ಹಗರಣ ಬಗ್ಗೆ ಮಾತಾಡುವ ಬದಲು ಬಿಜೆಪಿ ಅಧೀಕಾರಾವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು. ಇದೊಂದು ದೊಡ್ಡ ಹಗರಣವಾಗಿದ್ದು,ಸಂಬಂಧಪಟ್ಟ ಸಚಿವರಯ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ಇನ್ನು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಂತೆ  ಕಾಂಗ್ರೆಸ್‌ ಶಾಸಕರಾದ ಕೋನರೆಡ್ಡಿ ಮತ್ತು ನಯನಾ ಮೋಟಮ್ಮ  ಇಬ್ಬರು ಕೆರಳಿದರು. ಅವರಿಬ್ಬರ ಮಾತುಗಳ ನಡುವೆ ಅಶೋಕ್‌ ನೇತೃತ್ವದ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

2 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

2 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

2 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

2 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

2 hours ago