ಬೆಂಗಳೂರು : ವಾರಾಂತ್ಯದ ಬಳಿಕ ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು.
ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್ ಯುಟಿ ಖಾದರ್ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ, ಸಿಎಂ ಸಿದ್ದರಾಮಯ್ಯ ನವರು ಸಮಂಜಸ ಉತ್ತರ ನೀಡಿಲ್ಲ. ಅವರು ಹಗರಣ ಬಗ್ಗೆ ಮಾತಾಡುವ ಬದಲು ಬಿಜೆಪಿ ಅಧೀಕಾರಾವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು. ಇದೊಂದು ದೊಡ್ಡ ಹಗರಣವಾಗಿದ್ದು,ಸಂಬಂಧಪಟ್ಟ ಸಚಿವರಯ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಇನ್ನು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಶಾಸಕರಾದ ಕೋನರೆಡ್ಡಿ ಮತ್ತು ನಯನಾ ಮೋಟಮ್ಮ ಇಬ್ಬರು ಕೆರಳಿದರು. ಅವರಿಬ್ಬರ ಮಾತುಗಳ ನಡುವೆ ಅಶೋಕ್ ನೇತೃತ್ವದ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…