ಬೆಂಗಳೂರು : ವಾರಾಂತ್ಯದ ಬಳಿಕ ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು.
ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್ ಯುಟಿ ಖಾದರ್ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ, ಸಿಎಂ ಸಿದ್ದರಾಮಯ್ಯ ನವರು ಸಮಂಜಸ ಉತ್ತರ ನೀಡಿಲ್ಲ. ಅವರು ಹಗರಣ ಬಗ್ಗೆ ಮಾತಾಡುವ ಬದಲು ಬಿಜೆಪಿ ಅಧೀಕಾರಾವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು. ಇದೊಂದು ದೊಡ್ಡ ಹಗರಣವಾಗಿದ್ದು,ಸಂಬಂಧಪಟ್ಟ ಸಚಿವರಯ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಇನ್ನು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಶಾಸಕರಾದ ಕೋನರೆಡ್ಡಿ ಮತ್ತು ನಯನಾ ಮೋಟಮ್ಮ ಇಬ್ಬರು ಕೆರಳಿದರು. ಅವರಿಬ್ಬರ ಮಾತುಗಳ ನಡುವೆ ಅಶೋಕ್ ನೇತೃತ್ವದ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…