ರಾಜ್ಯ

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ಎಲ್ಲಾ ನಾಯಕರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ನಾವೆಲ್ಲ ಕೇಳುತ್ತೇವೆ ಎಂದಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಯಾವುದೇ ಗೊಂದಲಗಳಿಲ್ಲ. ಕರ್ನಾಟಕ ಶಾಂತವಾಗಿದೆ. ಈ ಬಾರಿ ಹಲವು ಕಡೆ ಉತ್ತಮ ಮಳೆ ಮತ್ತು ಬೆಳೆಯಾಗಿದೆ. ಒಳ್ಳೆಯ ಚಳಿಯ ವಾತಾವರಣ ಇದೆ. ಮುಂದಿನ ದಿನಗಳಲ್ಲಿ ಬೇಸಿಗೆಯಲ್ಲಿ ಭರ್ಜರಿ ಬಿಸಿಲು ಬರಬಹುದು. ಎಲ್ಲರಿಗೂ ಉತ್ತಮ ವಾತಾವರಣ ಇರುವ ರಾಜ್ಯ ಎಂದರೆ ಅದು ಕರ್ನಾಟಕ ಎಂದು ಹೇಳಿದರು.

ಮಾಜಿ ಸಚಿವ ಕೆ.ಎನ್.ರಾಜಣ್ಣ ಪಕ್ಷದ ಹಿರಿಯ ನಾಯಕರು. ಉಪಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದರಲ್ಲಿ ಅಂತ ವ್ಯತ್ಯಾಸಗಳೇನು ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago