ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಗೋಳು ಹೇಳತೀರದು, ಆದರೆ ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ. ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ ಹಾಗೂ ಬಂದ್ ಮಾಡುತ್ತಿದ್ದಾರೆ.
ಇದನ್ನು ಓದಿ: ನಾವೇನು ಕದ್ದು ಮುಚ್ಚಿ ಆರ್ಎಸ್ಎಸ್ ಶಾಖೆ ನಡೆಸುತ್ತಿಲ್ಲ: ಶಾಸಕ ಶ್ರೀವತ್ಸ
ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ಎಸ್ಎಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಆರ್ಎಸ್ಎಸ್ ನಿಷೇಧ ಮಾಡುವ ನಿಮ್ಮ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ. ಜನ ನಿಮಗೆ ಅಧಿಕಾರ ಕೊಟ್ಟಿರೋದು ಬರೀ ರಾಜಕಾರಣ ಮಾಡೋದಕ್ಕೆ ಅಲ್ಲ. ಆರ್ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…