ರಾಜ್ಯ

ಉಪನ್ಯಾಸಕರಿಂದಲೇ ವಿದ್ಯಾರ್ಥಿ ಮೇಲೆ ನಿರಂತರ ಅತ್ಯಾಚಾರ : ಮೂವರ ಬಂಧನ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ: ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಮತ್ತೊಬ್ಬ ಉಪನ್ಯಾಸಕನಿಂದ ಬ್ಲ್ಯಾಕ್‌ಮೇಲ್: ಉಪನ್ಯಾಸಕ ನರೇಂದ್ರ ದುಷ್ಕತ್ಯ ಎಸಗಿದ ಬಳಿಕ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಸ್ನೇಹಿತನಿಂದಲೂ ಅತ್ಯಾಚಾರ: ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್‌ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್‌ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago