ರಾಜ್ಯ

ಉಪನ್ಯಾಸಕರಿಂದಲೇ ವಿದ್ಯಾರ್ಥಿ ಮೇಲೆ ನಿರಂತರ ಅತ್ಯಾಚಾರ : ಮೂವರ ಬಂಧನ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ: ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಮತ್ತೊಬ್ಬ ಉಪನ್ಯಾಸಕನಿಂದ ಬ್ಲ್ಯಾಕ್‌ಮೇಲ್: ಉಪನ್ಯಾಸಕ ನರೇಂದ್ರ ದುಷ್ಕತ್ಯ ಎಸಗಿದ ಬಳಿಕ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಸ್ನೇಹಿತನಿಂದಲೂ ಅತ್ಯಾಚಾರ: ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್‌ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್‌ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

1 min ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

2 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

4 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

6 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

9 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

9 hours ago