ಬೆಂಗಳೂರು : ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿವಾದಾತ್ಮಕ ಹೇಳಿಕೆಗೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗ್ಡೆ ಕೇಂದ್ರ ಸಚಿವರಾಗಿದ್ದ ಅವರು ಜವಾಬ್ದಾರಿಯಿಂದ ಮಾತನಾಡಬೇಕು. ಅವರ ಈ ಹೇಳಿಕೆಯನ್ನು ಯಾರು ಒಪ್ಪುವುದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ನಾನೇನು ಪೊಲೀಸರಿಗೆ ಸೂಚನೆ ನೀಡಿಲ್ಲ. ಅವರಿಗೆ ಅವರ ಕೆಲಸ ಏನೆಂಬುದು ಗೊತ್ತಿದೆ, ಅದನ್ನು ಪೊಲೀಸರು ಮಾಡುತ್ತಾರೆ. ಅನಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಪೊಲೀಸರು ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ಹೇಳಿದರು.
ಶಾಂತಿ ಕದಡುವ ರೀತಿಯಲ್ಲಿ ಮಾತನಾಡುವುದು ಸರಿಯೇ? ಈ ರೀತಿಯ ಪ್ರಚೋದನಾಕಾರಿ ಹೇಳಿಕೆಯಿಂದ ಅನಾಹುತ ನಡೆದರೆ ಯಾರು ಹೊಣೆ. ಇವರಿಗೆ ಯಾರು ಪ್ರೇರೇಪಿಸಿದ್ದಾರೋ ಗೊತ್ತಿಲ್ಲ. ಏನಾದರೂ ಅಹಿತಕರ ಘಟನೆ ನಡೆದರೇ ಅನಂತ್ಕುಮಾರ್ ಅವರೇ ಜವಾಬ್ದಾರರಾಗಿರುತ್ತಾರೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವಹೇಳಕಾರಿ ಹೇಳಿಕೆ, ಪ್ರಚೋದಕಾರಿಯಾಗಿ ಮಾತನಾಡುವುದು, ಬೇರೆಯವರನ್ನು ನಿಂದಿಸಿ ಮಾತನಾಡುವುದನ್ನು ನಾವು ಸಹ ಗಮನಿಸುತ್ತಿದ್ದೇವೆ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ ಬಗ್ಗೆ ಮಾತನಾಡಿ, ಅದು ಅವರವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…